Friday, September 20, 2024
ಸುದ್ದಿ

ಕಂಬಳಕ್ಕೆ ಮತ್ತೆ ನಿಷೇಧ ಆಗುತ್ತಾ? – ಕಹಳೆ ನ್ಯೂಸ್

ಹೊಸದೆಲ್ಲಿ: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜನಪ್ರಿಯವಾಗಿರುವ ಕಂಬಳ ಕ್ರೀಡೆಗೆ ಅವಕಾಶ ಒದಗಿಸುವ ಕಾಯ್ದೆಯನ್ನು ಪ್ರಶ್ನಿಸಿ ಪ್ರಾಣಿ ದಯಾ ಆ ಸಂಸ್ಥೆ ಪೆಟಾ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಪಂಚ ಸದಸ್ಯರ ಸಂವಿದಾನ ಪೀಠಕ್ಕೆ ವರ್ಗಾಯಿಸಿದೆ.

ಕಂಬಳಕ್ಕೆ ಅವಕಾಶ ಕಲ್ಪಿಸುವ ಉದ್ಧೆಶದಿಂದ ರಾಜ್ಯ ವಿಧಾನಸಭೆ ಅಂಗೀಕರಿಸಿದ್ದ ಪ್ರಾಣಿ ಹಿಂಸೆ ತಡೆ ವಿಧೇಯಕ – 2017 ರ ಸಿಂಧುತ್ವನ್ನು ಪ್ರಶ್ನಿಸಿ ಪೇಟಾ ಸುಪ್ರೀಂ ಗೆ ಮೇಲ್ಮನವಿ ಸಲ್ಲಿಸಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮದನ್ ಬಿ ಲೋಕೂರ್ ನೇತೃತ್ವದ ನ್ಯಾಯಪೀಟವು ಪ್ರತಿಕಿಯೆ ಸಲ್ಲಿಸವಂತೆ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಈಗಾಗಲೇ ನಡೆಸುತ್ತಿರುವ ಐವರು ನ್ಯಾಯಮೂರ್ತಿಗಳ ಸಂವಿದಾನ ಪೀಠಕ್ಕೆ ಕಂಬಳ ಪ್ರಕರಣವನ್ನು ವರ್ಗಾಯಿಸಲು ನ್ಯಾಯಪೀಠ ನಿರ್ಧರಿಸಿತು.

ಜಾಹೀರಾತು

ಕಂಬಳಕ್ಕೆ ಅವಕಾಶ ನೀಡಿದಲ್ಲಿ ಕೇಂದ್ರದ 1960 ರ ಪ್ರಾಣಿ ಹಿಂಸೆ ತಡೆ ಕಾಯಿದೆಯ ಸ್ಪಷ್ಟ ಉಲ್ಲಂಘನೆಯಾಗುತ್ತದೆ ಎಂದು ಅರ್ಜಿದಾರರು ದೂರಿದ್ದರಿಂದ ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರಕಾರ ಹಾಗೂ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಗೆ ಕೋರ್ಟ್ ನೋಟೀಸ್ ಜಾರಿ ಮಾಡಿದೆ.