Friday, September 20, 2024
ಸುದ್ದಿ

ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ – ಕಹಳೆ ನ್ಯೂಸ್

ತುಮಕೂರಿನ ಸಿದ್ದಗಂಗಾ ಮಠದ ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಗಳು ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಲವಲವಿಕೆಯಿಂದಿಲೇ ಇದ್ದಾರೆ, ಶ್ರಿಗಳಿಗೆ ಎಂಡೋಸ್ಕೋಫ್ ಪರೀಕ್ಷೆ ಮಾಡಲಾಗುತ್ತಿದೆ, ಬಳಿಕ ಶಸ್ತ್ರ ಚಿಕಿತ್ಸೆಗೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸುತ್ತೂರು ಸ್ವಾಮೀಜಿಗಳು ಹೇಳಿದ್ದಾರೆ.

ಇನ್ನು ಶ್ರೀಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಸಿದ್ದಗಂಗಾ ಮಠದ ಕಿರಿಯ ಶ್ರೀಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀಗಳ ಆರೋಗ್ಯದ ಬಗ್ಗೆ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದೇನೆ. ಇದಲ್ಲದೆ ಚೆನ್ನೈನ ಆಸ್ಪತ್ರೆಯ ವೈದ್ಯರೊಂದಿಗೂ ನಾನು ಮಾತನಾಡಿದ್ದೇನೆ, ಶ್ರೀಗಳು ಶೀಘ್ರವೇ ಗುಣಮುಖರಾಗಲಿ ಎಂದು ಬರೆದಿದ್ದಾರೆ.

ಜಾಹೀರಾತು