ನವದೆಹಲಿ: ಬಹುಸಮಯದಿಂದ ನಡೆಯುತ್ತಿದ್ದ ೨೦೧೯ರ ಲೋಕಸಭಾ ಚುನಾವಣೆಯಲ್ಲಿ ಬಿಹಾರದ ಸೀಟು ಹಂಚಿಕೆ ವಿಚಾರವಾಗಿ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹ ಎನ್ಡಿಎ ಮೈತ್ರಿಕೂಟ ತೊರೆಯುವ ನಿರ್ಧಾರ ಮಾಡಿದ್ದಾರೆ. ಮೂಲಗಳ ಪ್ರಕಾರ ಉಪೇಂದ್ರ ಕುಶ್ವಾಹ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿಂದೆ ಆಂಧ್ರ ಪ್ರದೇಶಕ್ಕೆ ವಿಶೇಷ ಸವಲತ್ತು ನೀಡದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಎನ್ಡಿಯ ಕೂಟ ತೊರೆದಿದ್ದರು. ಅದಾದ ನಂತರ ಎರಡನೆಯವರಾಗಿ ಕುಶ್ವಾಹ ಹೊರನಡೆದಿದ್ದಾರೆ.
ಈ ಸಂಬಂಧ ಇಂದು ಮಧ್ಯಾಹ್ನ ದೆಹಲಿಯಲ್ಲಿ ರಾಷ್ಟ್ರೀಯ ಲೋಕ ಶಕ್ತಿ ಪಕ್ಷದ (ಆರ್ಎಲ್ಎಸ್ಪಿ) ಮುಖ್ಯಸ್ಥ ಉಪೇಂದ್ರ ಕುಶ್ವಾಹ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಲೋಕಸಭಾ ಅಧಿವೇಶನಕ್ಕೆ ಇನ್ನೊಂದು ದಿನ ಬಾಕಿ ಇರುವ ಹಿನ್ನೆಲೆಯಲ್ಲಿ ಇಂದು ಸಂಜೆ ಎನ್ಡಿಎ ತನ್ನ ಮಿತ್ರಪಕ್ಷಗಳ ಸಭೆ ಆಯೋಜನೆ ಮಾಡಿದ್ದು, ಈ ಸಭೆಗೆ ಉಪೇಂದ್ರ ಗೈರಾಗುವ ಸಾಧ್ಯತೆ ಇದೆ.
ಬಿಹಾರದಲ್ಲಿ ಒಟ್ಟು 40 ಲೋಕಸಭಾ ಕ್ಷೇತ್ರಗಳಿದ್ದು, ಈ ಪೈಕಿ ಬಿಜೆಪಿ ಮತ್ತು ಜೆಡಿ (ಯು) ಎರಡು ಪಕ್ಷಗಳು ತಲಾ 17 ಕ್ಷೇತ್ರಗಳಿಂದ ಸ್ರ್ಧೆ ಮಾಡುವುದಾಗಿ ಒಪ್ಪಂದ ಮಾಡಿಕೊಂಡಿರುವುದು ಕುಶ್ವಾಹ ಅವರ ಕೋಪಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ತಾತ್ಕಾಲಿಕವಾಗಿ ಮಾಡಿಕೊಳ್ಳಲಾಗಿರುವ ಒಪ್ಪಂದದ ಪ್ರಕಾರ ಆರ್ಎಲ್ಎಸ್ಪಿಗೆ ಎರಡು ಸ್ಥಾನಗಳನ್ನು ನೀಡಲಾಗಿದೆ. ಇದು 2014ರಲ್ಲಿ ಆರ್ಎಲ್ಎಸ್ಪಿ ಗೆದ್ದ ಸಂಖ್ಯೆಗಿಂತ ಒಂದು ಸ್ಥಾನ ಕಡಿಮೆಯೇ ಇದೆ. ಕುಶ್ವಾಹ ಅವರು ಕಾರಕತ್ ಕ್ಷೇತ್ರದಿಂದ ಗೆದ್ದು ಬಂದಿದ್ದಾರೆ. ಇದೇ ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿದ್ದ ಅರುಣ್ ಕುಮಾರ್ ಅವರನ್ನು ಕಳೆದ ಎರಡು ರ್ಷಗಳ ಹಿಂದೆ ಪಕ್ಷದಿಂದ ಅಮಾನತು ಮಾಡಲಾಗಿದೆ.
ಆರ್ಎಲ್ಎಸ್ಪಿ ಎನ್ಡಿಎ ಮೈತ್ರಿಕೂಟ ತೊರೆದು ವಿರೋಧ ಪಕ್ಷಗಳ ಕೂಟ ಸೇರುವ ಸಾಧ್ಯತೆ ಇದೆ. ಲಾಲುಪ್ರಸಾದ್ ಯಾದವ್ ಅವರ ಆರ್ಜೆಡಿ ಮತ್ತು ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗುತ್ತಿದೆ.