Friday, September 20, 2024
ಸುದ್ದಿ

ಕೈಕಂಬದಲ್ಲಿ ದುಷ್ಕರ್ಮಿಗಳಿಂದ ಮೂವರಿಗೆ ಚೂರಿ ಇರಿತ – ಕಹಳೆ ನ್ಯೂಸ್

ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಮೂವರಿಗೆ ಚಾಕುವಿನಿಂದ ಇರಿದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಕೈಕಂಬದಲ್ಲಿ ರಾತ್ರಿ ನಡೆದಿದೆ.

ಅನ್ಸಾರ್, ಸಫ್ವಾನ್ ಹಾಗೂ ಫಯಾಝ್ ಎಂಬುವವರು ಚೂರಿ ಇರಿತಕ್ಕೊಳಗಾಗಿದ್ದಾರೆ ಎಂದು ತಿಳಿದು ಬಂದಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ರಾತ್ರಿ ಹತ್ತು ಗಂಟೆಗೆ ಸುಮಾರಿಗೆ ಕಾರಿನಲ್ಲಿ ಬಂದ ತಂಡವೊಂದು ಕೈಕಂಬದ ಬಳಿ ನಿಂತಿದ್ದ ಮೂವರು ಯುವಕರಿಗೆ ಹಲ್ಲೆ ನಡೆಸಿದೆ. ತದನಂತರ ಚಾಕುವಿನಿಂದ ಇರಿದು ಪರಾರಿಯಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.