Saturday, September 21, 2024
ಸುದ್ದಿ

ಯಾರೇ ವಿರೋಧಿಸಿದರೂ ಟಿಪ್ಪು ಜಯಂತಿ ಆಚರಿಸುತ್ತೇವೆ | ಸಿ.ಎಂ. ಮಂಗಳೂರಿನಲ್ಲಿ ಹೇಳಿಕೆ.

ಮಂಗಳೂರು : ‘ಯಾರೇ ವಿರೋಧಿಸಿದರೂ ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಣೆ ಮಾಡುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿಕೆ ನೀಡಿದ್ದಾರೆ. 

ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ  ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಈ ಹೇಳಿಕೆ ನೀಡಿದ್ದಾರೆ.
‘ಟಿಪ್ಪು ಜಯಂತಿಯನ್ನು  ವಿರೋಧಿಸುವವರು ಮೊದಲು ಇತಿಹಾಸ ತಿಳಿದುಕೊಳ್ಳಲಿ. ಶಿಷ್ಟಾಚಾರದ ಪ್ರಕಾರ ಆಮಂತ್ರಣ ಪತ್ರಿಕೆಯಲ್ಲಿ  ಹೆಸರು ಹಾಕಿದ್ದೇವೆ. ಯಾರೇ ಬರಲಿ ಬಿಡಲಿ ನಾವು ಟಿಪ್ಪು ಜಯಂತಿ ಆಚರಿಸುತ್ತೇವೆ’ ಎಂದರು.
‘ಯಾರೋ ಬರದೇ ಇದ್ದರೆ ಏನೂ ಆಗುವುದಿಲ್ಲ. ಕಾನೂನು ಸುವ್ಯವಸ್ಥೆಗೆ ಯಾವ ತೊಂದರೆಯೂ ಆಗುವುದಿಲ್ಲ’ ಎಂದು ಕೇಂದ್ರ ಸಚಿವ ಅನಂತ್‌ಕುಮಾರ್‌ ಹೆಗಡೆಗೆ ತಿರುಗೇಟು ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

Leave a Response