Friday, September 20, 2024
ಸುದ್ದಿ

ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯ: ರಾಜ್ಯಾದ್ಯಂತ ಸರಕಾರಿ ರಜೆ ಘೋಷಣೆ – ಕಹಳೆ ನ್ಯೂಸ್

ತುಮಕೂರು: ಶ್ರೀಗಳ ನಿಧನದಿಂದ ಧಾರ್ಮಿಕ ಕ್ಷೇತ್ರಕ್ಕೆ ಭರಿಸಲಾರದ ನಷ್ಟ ಉಂಟಾಗಿದೆ ಎಂದು ಬಣ್ಣಿಸಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಶ್ರೀಗಳ ಗೌರವಾರ್ಥ ಮಂಗಳವಾರ ರಾಜ್ಯಾದ್ಯಂತ ಸರಕಾರಿ ರಜೆ ಘೋಷಿಸಲಾಗಿದೆ.

ಸಿದ್ಧಗಂಗಾ ಮಠದಲ್ಲಿ ಸೋಮವಾರ ಬೆಳಗ್ಗೆ ನಿಧನರಾದ ಕರ್ನಾಟಕ ರತ್ನ ಡಾ. ಶಿವಕುಮಾರ ಶ್ರೀಗಳ ಪಾರ್ಥಿವ ಶರೀರದ ಕ್ರಿಯಾ ಸಮಾಧಿ ಮಂಗಳವಾರ ಸಂಜೆ 4:30ಕ್ಕೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಾಳೆ ರಾಜ್ಯಾದ್ಯಂತ ಶಾಲೆ, ಕಾಲೇಜುಗಳು, ಸರಕಾರಿ ಕಚೇರಿಗಳು ತೆರೆದಿರುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ. 3 ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ನಡೆಯಲಿದೆ.

ಜಾಹೀರಾತು