Friday, September 20, 2024
ಸುದ್ದಿ

ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರ್ ಚಲಾಯಿಸಿದ ನಿವೃತ್ತ ಪೊಲೀಸ್ ಅಧಿಕಾರಿ! – ಕಹಳೆ ನ್ಯೂಸ್

ಮಂಗಳೂರು : ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನಿವೃತ್ತ ಎಸ್ ಪಿ ಮಿತ್ರ ಹೆರಾಜೆ ಕಾರು ಚಲಾಯಿಸುತ್ತಾ ಕದ್ರಿಯಿಂದ ಕೆಪಿಟಿ ಕಡೆಗೆ ಹೋಗುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಡಿಕ್ಕಿಯಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಕೂಡಲೇ ಆಕ್ರೋಶಗೊಂಡ ಸಾರ್ವಜನಿಕರುಉ ಕಾರಿಗೆ ಮುತ್ತಿಗೆ ಹಾಕಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಾಹಿತಿ ತಿಳಿದ ಕದ್ರಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಘಟನೆಯನ್ನು ತಿಳಿಗೊಳಿಸಲು ಲಘು ಲಾಠಿ ಪ್ರಹಾರ ನಡೆಸಿದ್ದು, ಕಾನೂನು ಪಾಲನೆ ಮಾಡಬೇಕಿದ್ದ ಅಧಿಕಾರಿಯೇ ಕುಡಿದು ಅಡ್ಡಾದಿಡ್ಡಿ ವಾಹನ ಚಲಾಯಿಸಿರುವುದು ಸಾರ್ವಜನಿಕರ ಟೀಕೆಗೆ ಕಾರಣವಾಗಿದೆ.

ಜಾಹೀರಾತು