Friday, September 20, 2024
ಸುದ್ದಿ

ಅಯೋಧ್ಯೆ ವಿವಾದವನ್ನು ನಮಗೆ ಒಪ್ಪಿಸಿ, 24 ಗಂಟೆಯಲ್ಲೇ ಸಮಸ್ಯೆ ಬಗೆಹರಿಸ್ತೇವೆ; ಯೋಗಿ – ಕಹಳೆ ನ್ಯೂಸ್

ನವದೆಹಲಿ: ಅಯೋಧ್ಯೆ ವಿವಾದವನ್ನು ನಮಗೆ ಹಸ್ತಾಂತರಿಸಿದರೆ ನಾವು ಅದನ್ನು ಕೇವಲ 24 ಗಂಟೆಯಲ್ಲೇ ಬಗೆಹರಿಸುತ್ತೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.

ರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂಗಳು ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ. ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದಷ್ಟು ಬೇಗ ತೀರ್ಪು ನೀಡಬೇಕು. ಬೇಗ ತೀರ್ಪು ನೀಡಲು ಸಾಧ್ಯವಾಗದಿದ್ದರೆ ವಿವಾದವನ್ನು ನಮಗೆ ಒಪ್ಪಿಸಿ. ನಾವು 24 ಗಂಟೆಯಲ್ಲಿ ಇತ್ಯರ್ಥಪಡಿಸುತ್ತೇವೆ ಎಂದು ಅವರು ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು