Friday, September 20, 2024
ಸುದ್ದಿ

ಲೋಕಸಭಾ ಚುನಾವಣೆಗೂ ಮುನ್ನ ಮಹತ್ವದ ತೀರ್ಮಾನ ಕೈಗೊಳ್ಳಲಿರುವ ಕೇಂದ್ರ ಸರ್ಕಾರ – ಕಹಳೆ ನ್ಯೂಸ್

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಫೆಬ್ರವರಿ 1ರಂದು ಮಂಡನೆಯಾದ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಹಣಕಾಸು ಸಚಿವ ಪಿಯೂಷ್ ಗೋಯಲ್, ಎಲ್ಲ ವರ್ಗದ ಜನತೆಗೆ ಅನುಕೂಲವಾಗುವಂತಹ ಹಲವು ಯೋಜನೆಗಳನ್ನು ಘೋಷಿಸಿದ್ದರು.

ಇದೀಗ ಲೋಕಸಭಾ ಚುನಾವಣೆಗೂ ಮುನ್ನ ಮತ್ತೊಂದು ಮಹತ್ವದ ತೀರ್ಮಾನ ಕೈಗೊಳ್ಳಲು ನರೇಂದ್ರ ಮೋದಿಯವರ ಸರ್ಕಾರ ಮುಂದಾಗಿದ್ದು, ಲೋಕಸಭಾ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಕೇಂದ್ರ ಸರ್ಕಾರಿ ನೌಕರರು ಹಲವು ದಿನಗಳಿಂದ ಬಹು ನಿರೀಕ್ಷೆಯಿಂದ ಕಾಯುತ್ತಿರುವ ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸುವ ನಿರೀಕ್ಷೆಯಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಏಳನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಂಡರೆ ಕೇಂದ್ರ ಸರ್ಕಾರಿ ನೌಕರರ ಈಗಿನ ಕನಿಷ್ಠ ವೇತನವಾದ 18 ಸಾವಿರ ರೂ. ಗಳಿಂದ 26 ಸಾವಿರ ರೂ. ಗಳಿಗೆ ಏರಿಕೆಯಾಗಲಿದ್ದು, ಜೊತೆಗೆ ಇನ್ನೂ ಕೆಲವು ಸೌಲಭ್ಯಗಳು ದೊರೆಯಲಿವೆ.

ಜಾಹೀರಾತು