Friday, September 20, 2024
ಸುದ್ದಿ

ಸುಬ್ರಹ್ಮಣ್ಯ ಅಟೋ ಚಾಲಕ ಮಾಲಕರ ಸಂಘದ ವಾರ್ಷಿಕೋತ್ಸವ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೇಶ್ರೀ ಸುಬ್ರಹ್ಮಣ್ಯ ಅಟೋ ಚಾಲಕರ ಹಾಗು ಮಾಲಕರ ಸಂಘದ ಎಂಟನೇ ವರ್ಷದ ವಾರ್ಷಿಕೋತ್ಸವದ ಅದ್ಧೂರಿಯಿಂದ ನೆರವೇರಿತು.

ವನದುರ್ಗ ದೇವಿ ದೇವಸ್ಥಾನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಸಭಾ ನಡೆಯಿತು. ಪೂಜಾ ಸಮಯದಲ್ಲಿ ಸುಬಹ್ಮಣ್ಯ ಮಠ ಶ್ರೀ ಪಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ ಶುಭ ಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಮೇಶ್ ಕೆ. ಎನ್ ವಹಿಸಿಕೊಂಡಿದ್ದು, ಸುಳ್ಯ ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ ಮುಖ್ಯ ಅತಿಥಿಯಾಗಿ ಆಗಮಿಸಿದರು.

ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ನನ ಮರ್ಲ್ ಕಟೋಡ್ಚಿ ಎಂಬ ನಾಟಕ ಪ್ರದರ್ಶನ ನಡೆಯಿತು.