Friday, September 20, 2024
ಸುದ್ದಿ

ಬಿಸಿರೋಡ್‌ನಲ್ಲಿ ಸ್ತ್ರೀ ಶಕ್ತಿ ಗೊಂಚಲು ಗುಂಪುಗಳ ಬಲವರ್ಧನೆಗೆ ಪುನಶ್ಚೇತನ ತರಬೇತಿ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ , ಬಂಟ್ವಾಳ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ (ರಿ.) ಇವರ ಸಂಯುಕ್ತ ಆಶ್ರಯದಲ್ಲಿ ಸ್ತ್ರೀ ಶಕ್ತಿ ಗೊಂಚಲು ಗುಂಪುಗಳ ಬಲವರ್ಧನೆಗೆ ಸದಸ್ಯ ರಿಗೆ ಪುನಶ್ಚೇತನ ತರಬೇತಿ ಕಾರ್ಯಕ್ರಮ ಸ್ತ್ರೀ ಶಕ್ತಿಭವನ ಬಿಸಿರೋಡ್ ಇಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ಮಹಿಳೆಯರು ಆರ್ಥಿಕ ವಾಗಿ ಅಭಿವೃದ್ಧಿ ಬಲಾಢ್ಯಗೊಂಡಾಗ ಪ್ರತಿ ಮನೆಯೂ ಆರ್ಥಿಕ ವಾಗಿ ಸಬಲವಾಗುತ್ತದೆ ಎಂದರು.
ಮಹಿಳೆಯರ ಗುಂಪುಗಳು ಸಕ್ರಿಯವಾಗಿ , ಬೆಳೆಯುವ ಉದ್ದೇಶದಿಂದ ಇಂತಹ ಕಾರ್ಯಕ್ರಮ ಗಳು ಅವಶ್ಯ ಎಂಬ ನಿಟ್ಟಿನಲ್ಲಿ ಸರಕಾರ ಆಯೋಜನೆ ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಎಲ್ಲಾ ಸದಸ್ಯ ರು ಇದರ ಪ್ರಯೋಜನ ಪಡೆದು ಇತರರಿಗೆ ಪ್ರೇರಣೆ ಯಾಗಬೇಕು ಎಂದರು. ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಮಹಿಳೆಯರು ಆರ್ಥಿಕ ವಾಗಿ ಸಾಮಾಜಿಕ ವಾಗಿ, ರಾಜಕೀಯ ವಾಗಿ ಸಬಲೀಕರಣಕ್ಕೆ ಸ್ತ್ರೀ ಶಕ್ತಿ ಒಕ್ಕೂಟ ಸಹಕಾರಿಯಾಗಿದೆ ಎಂದರು.

ಜಾಹೀರಾತು

ಮನೆಯ ಜವಬ್ದಾರಿಯ ಜೊತೆ ಸಂಘಟನೆಯ ಮೂಲಕ ಸಂಘಟನಾತ್ಮಕ ವಾಗಿ ಬೆಳೆಯುವ ಕ್ರಾಂತಿ ಕಾರಕ ಬದಲಾವಣೆಗೆ ಸರಕಾರ ಚಿಂತಿಸಿ ಈ ಸವಲತ್ತುಗಳನ್ನು ನೀಡಿದೆ. ಇಚ್ಛಾಶಕ್ತಿ ಯ ಮೂಲಕ ಆರ್ಥಿಕ ವಾಗಿ ಬೆಳೆಯ ಲು ಸರಕಾರ ನೀಡಿದ ಯೋಜನೆ ಗಳನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಅವರು ಹೇಳಿದರು.

ತಾಲೂಕು‌ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಾತನಾಡಿ ಕಾರ್ಯಕ್ರಮಗಳ ಮೂಲಕ ಇತರ ತಾಲೂಕಿಗೆ ಮಾದರಿಯಾಗಿ ಕೆಲಸ ನಿರ್ವಹಣೆ ಮಾಡುವ ಇಲಾಖೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ. ಬಂಗೇರ, ತಾಲೂಕು ಪಂಚಾಯತ್ ಸದಸ್ಯ ಮಲ್ಲಿಕಾ ಶೆಟ್ಟಿ, ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಅಧ್ಯಕ್ಷೆ ರೇವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಹಿರಿಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ ಸ್ವಾಗತಿಸಿ, ಮೇಲ್ವಿಚಾರಕಿ ಶಾಲಿನಿ ವಂದಿಸಿದರು. ಹಿರಿಯ ಮೇಲ್ವಿಚಾರಕಿ ಭಾರತಿ ಬಿ. ಕಾರ್ಯಕ್ರಮ ನಿರೂಪಿಸಿದರು.