Friday, September 20, 2024
ರಾಜಕೀಯಸುದ್ದಿ

ಕಾಂಗ್ರೆಸ್ ಶಾಸಕ ಡಾ. ಉಮೇಶ್ ಜಾಧವ್ ಬಿಜೆಪಿ ಸೇರ್ಪಡೆಗೆ ಗ್ರೀನ್ ಸಿಗ್ನಲ್ – ಕಹಳೆ ನ್ಯೂಸ್

ಕಾಂಗ್ರೆಸ್ ಶಾಸಕ ಡಾ. ಉಮೇಶ್ ಜಾಧವ್ ಅವರು ಬಿಜೆಪಿ ಸೇರ್ಪಡೆಗೆ ಬಂಜಾರ ಸಮುದಾಯದ ಮುಖಂಡರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ.

ಕಲಬುರ್ಗಿ ಜಿಲ್ಲೆಯ ಚಿಂಚೋಳಿ ಕ್ಷೇತ್ರದ ಅತೃಪ್ತ ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ್ ಫೋಟೋ ಇರುವ ಬ್ಯಾನರ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಫೋಟೋ ನಾಪತ್ತೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಸ್ವಾಗತ ಬ್ಯಾನರ್ ನಲ್ಲಿ ಡಾ. ಉಮೇಶ್ ಜಾಧವ್ ಜೊತೆ ಬಿಜೆಪಿ ಮುಖಂಡರ ಫೋಟೋಗಳು ರಾರಾಜಿಸುತ್ತಿವೆ. ಬಿಜೆಪಿ ಮುಖಂಡ ಸುಭಾಷ್ ರಾಠೋಡ್ ಸೇರಿದಂತೆ ಹಲವು ನಾಯಕರ ಫೋಟೋಗಳನ್ನು ಹಾಕಲಾಗಿದೆ.

ಜಾಹೀರಾತು

ಈ ಹಿನ್ನೆಲೆಯಲ್ಲಿ ಉಮೇಶ್ ಜಾಧವ್ ಕಾಂಗ್ರೆಸ್ ಗೆ ಕೈ ಕೊಟ್ಟು ಬಿಜೆಪಿ ಸೇರ್ಪಡೆಗೆ ಬಂಜಾರ ಸಮುದಾಯದ ಮುಖಂಡರು ಹಸಿರು ನಿಶಾನೆ ತೋರಿಸಿದ್ದಾರೆ ಎಂದು ಹೇಳಲಾಗುತ್ತಿದೆ.