ಮಡಿಕೇರಿ : ಮಡಿಕೇರಿಯಲ್ಲಿ ಟಿಪ್ಪು ಜಯಂತಿ ಆಚರಣೆ ಹಿನ್ನಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡರು ಈ ನಡುವೆ ಹಿಂದೂ ಸಂಘಟನೆ ಮತ್ತು ಪ್ರತಿಭಟನಾ ಕಾರರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದರು. ಟಿಪ್ಪು ಜಯಂತಿಯ ವಿರುದ್ಧ ದಿಕ್ಕಾರ ಕೂಗುತ್ತ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.ಜೈ ಶ್ರೀ ರಾಮ್ ಘೋಷಣೆ ಕೂಗುತ್ತ ಮುನ್ನುಗ್ಗುತಿದ್ದ ಸಾವಿರಾರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ಕಹಳೆ ನ್ಯೂಸ್ ಗೆ ಲಭಿಸಿದೆ.