Friday, September 20, 2024
ಸುದ್ದಿ

ಉಡುಪಿ ಬೀಡಿನಗುಡ್ಡೆಯಲ್ಲಿ ವಲಸೆ ಕಾರ್ಮಿಕನ ಕೊಲೆ – ಕಹಳೆ ನ್ಯೂಸ್

ಉಡುಪಿ: ಬೀಡಿನಗುಡ್ಡೆ ಮೈದಾನ ಸಮೀಪ ವಲಸೆ ಕಾರ್ಮಿಕರೊಬ್ಬರನ್ನು ಕೊಲೆ ಮಾಡಿರುವ ಘಟನೆ ರವಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಕೊಲೆಗೀಡಾದ ಕಾರ್ಮಿಕನ ವಿವರ ಇನ್ನಷ್ಟೆ ತಿಳಿದು ಬರಬೇಕಾಗಿದೆ. ಸ್ಥಳಕ್ಕೆ ಆಗಮಿಸಿರುವ ಉಡುಪಿ ನಗರ ಠಾಣೆ ಪೊಲೀಸರು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಕಾರ್ಮಿಕರ ನಡುವೆ ಉಂಟಾದ ಜಗಳದಿಂದ ಈ ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು