Recent Posts

Saturday, September 21, 2024
ರಾಜಕೀಯಸುದ್ದಿ

ನಿಖಿಲ್‍ರನ್ನು ರಾಜಕೀಯಕ್ಕೆ ಕರೆ ತಂದಿರುವುದರ ಹಿಂದಿನ ಸತ್ಯವೇನು ಗೊತ್ತಾ..? – ಕಹಳೆ ನ್ಯೂಸ್

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ಕುಟುಂಬದಿಂದ ಮೂವರು ಕಣಕ್ಕಿಳಿದಿದ್ದಾರೆ. ದೇವೇಗೌಡರು ತುಮಕೂರಿನಿಂದ, ಪ್ರಜ್ವಲ್ ರೇವಣ್ಣ ಹಾಸನದಿಂದ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪುತ್ರನ ಗೆಲುವಿಗಾಗಿ ಭರ್ಜರಿ ಪ್ರಚಾರ ನಡೆಸುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿಯನ್ನು ರಾಜಕೀಯಕ್ಕೆ ಕರೆ ತಂದಿರುವುದರ ಹಿಂದಿನ ಗುಟ್ಟು ಬಿಚ್ಚಿಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಡ್ಯ ಜಿಲ್ಲೆ ಕೆ.ಎಂ. ದೊಡ್ಡಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನನಗೀಗಾಗಲೇ 2 ಮೇಜರ್ ಆಪರೇಷನ್ ಆಗಿದೆ. ಆರೋಗ್ಯವೂ ಹದಗೆಡುತ್ತಿದೆ. ಹೀಗಾಗಿ ಇನ್ನೆಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ. ಹೀಗಾಗಿ ಮಂಡ್ಯದಲ್ಲಿ ಹಮ್ಮಿಕೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮುಂದುವರಿಸಿಕೊಂಡು ಹೋಗುವ ಸಲುವಾಗಿ ಮಗನನ್ನು ರಾಜಕೀಯಕ್ಕೆ ಕರೆತರಬೇಕಾಯಿತು ಎಂದು ಹೇಳಿದ್ದಾರೆ.

ಜಾಹೀರಾತು