Recent Posts

Sunday, September 22, 2024
ಸುದ್ದಿ

ಪಿಯುಸಿ ಪರೀಕ್ಷೆಯಲ್ಲಿ ಫೇಲಾದ ಕಾರಣಕ್ಕೆ ಬೇಸತ್ತು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ – ಕಹಳೆ ನ್ಯೂಸ್

ಮೂಡುಬಿದಿರೆ: ಪಿಯುಸಿ ಪರೀಕ್ಷೆಯಲ್ಲಿ ಫೇಲಾದ ಕಾರಣಕ್ಕೆ ಬೇಸತ್ತು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಾಂಟ್ರಾಡಿಯ ಹಿನ್ನಲ ಪಲ್ಕೆ ಮನೆ ಜಯ ಶೆಟ್ಟಿಯವರ ಪುತ್ರಿ ಪ್ರತೀಕ್ಷಾ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಮೂಡುಬಿದಿರೆಯ ಟ್ಯುಟೋರಿಯಲ್‍ನಲ್ಲಿ ಕಲಿತು ಖಾಸಗಿಯಾಗಿ ಪರೀಕ್ಷೆ ಬರೆದಿದ್ದಳು. ಪರೀಕ್ಷೆಯ ಬಳಿಕ ಪ್ರತೀಕ್ಷಾ ಪುಣೆಯಲ್ಲಿರುವ ತನ್ನ ಚಿಕ್ಕಪ್ಪನ ಮನೆಗೆ ತೆರಳಿದ್ದಳು. ಸೋಮವಾರ ಪರೀಕ್ಷೆ ಫಲಿತಾಂಶದಲ್ಲಿ ಅನುತೀರ್ಣಗೊಂಡದ್ದು ತಿಳಿದು ಬೇಸರಗೊಂಡ ಆಕೆ ಚಿಕ್ಕಪ್ಪನ ಮನೆಯಲ್ಲಿ ಕೋಣೆಯೊಂದರಲ್ಲಿ ಫ್ಯಾನಿಗೆ ಸೀರೆ ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಳೆನ್ನಲಾಗಿದೆ. ಮಂಗಳವಾರ ಆಕೆಯ ಮೃತದೇಹವನ್ನು ಹುಟ್ಟೂರಿನಲ್ಲಿ ಮನೆಗೆ ತಂದು ಅಂತ್ಯ ಸಂಸ್ಕಾರ ನಡೆಸಲಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು

ಜಾಹೀರಾತು