Wednesday, September 18, 2024
ಸುದ್ದಿ

ಬೆಳ್ತಂಗಡಿ: ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಕರಣಿಕ, ಸಹಾಯಕ ಎಸಿಬಿ ಬಲೆಗೆ – ಕಹಳೆ ನ್ಯೂಸ್

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಕಡಿರುದ್ಯಾವರ- ಮಿತ್ತಬಾಗಿಲು ಗ್ರಾಮ ಕರಣಿಕ ಮತ್ತು ಸಹಾಯಕ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಬಲೆಗೆ ಬಿದ್ದ ಘಟನೆ ನಡೆದಿದೆ. ವಿ.ಎ. ಮಂಜುನಾಥ್ ಮತ್ತು ಸಹಾಯಕ ರಮೇಶ್ ನಾಯ್ಕ್ ಎಸಿಬಿ ಬಲೆಗೆ ಬಿದ್ದವರು. ಆರ್.ಟಿ.ಸಿ. ಹೆಸರು ಬದಲಾವಣೆಗಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇವರಿಬ್ಬರನ್ನು ಎಸಿಬಿ ರೆಡ್ ಹ್ಯಾಂಡಾಗಿ ಸೆರೆ ಹಿಡಿದಿದೆ.

ಮಿತ್ತಬಾಗಿಲಿನ ಸಾಮಾಜಿಕ ಕಾರ್ಯಕರ್ತ ಪ್ರದೀಪ್ ಗೌಡ ಎಂಬವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಎಸಿಬಿ ಈ ಕಾರ್ಯಾಚರಣೆ ನಡೆಸಿದೆ. ಆರ್.ಟಿ.ಸಿ. ಹೆಸರು ಬದಲಾವಣೆಗೆ ವಿಎ ಮಂಜುನಾಥ್ ಮತ್ತು ಸಹಾಯಕ ರಮೇಶ್ ನಾಯ್ಕ್ 5 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದರೆನ್ನಲಾಗಿದೆ. ಅದರಂತೆ ಪ್ರದೀಪ್‍ರಿಂದ ಶುಕ್ರವಾರ ರಮೇಶ್ ನಾಯ್ಕ್ ಎರಡು ಸಾವಿರ ರೂ. ಪಡೆದಿದ್ದರೆನ್ನಲಾಗಿದೆ. ಎಸಿಬಿ ಸೂಚನೆಯಂತೆ ಇಂದು ಬೆಳಗ್ಗೆ ಮತ್ತೆ ಮೂರು ಸಾವಿರ ನೀಡುತ್ತಿದ್ದ ವೇಳೆ ಈ ದಾಳಿ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು