
ಬೆಳ್ತಂಗಡಿ: ಮಾನ್ಯ ಶಾಸಕರಾದ ಹರೀಶ್ ಪೂಂಜರವರ ಪ್ರದೇಶಾಭಿವೃದ್ಧಿ ನಿಧಿಯಿಂದ ತಾಲೂಕಿನ 7 ಕಡೆಗಳಲ್ಲಿ ತಲಾ 5 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದೆ. ಸಾರ್ವಜನಿಕ ಬಸ್ಸು ತಂಗುದಾಣದ ಕಾಮಗಾರಿಗೆ ಕಕ್ಕಿಂಜೆಯಲ್ಲಿ ತಾಲೂಕು ಪಂಚಾಯತ್ ಸದಸ್ಯರಾದ ಕೊರಗಪ್ಪ ಗೌಡ ಮತ್ತು ಪಂಚಾಯತ್ ಅಧ್ಯಕ್ಷೆ ಶೈಲಜಾ ರಾಜೇಶ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.