Recent Posts

Saturday, September 21, 2024
ಸುದ್ದಿ

ಕರ್ನಾಟಕ ಕರಾವಳಿ ತೀರಗಳಲ್ಲಿ ಕಟ್ಟೆಚ್ಚರ : ಅಪ್ಪಳಿಸುತ್ತಿರುವ ಭಾರಿ ಅಲೆಗಳು – ಕಹಳೆ ನ್ಯೂಸ್

ಮಂಗಳೂರು :  ಈಗಾಗಲೇ ಕೇರಳಕ್ಕೆ ಮುಂಗಾರು ಪ್ರವೇಶಿಸಿದ್ದು, ರಾಜ್ಯಕ್ಕೂ ಇಂದು ಮುಂಗಾರು ಪ್ರವೇಶಿಸಲಿದೆ. ಇದರಿಂದ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕರಾವಳಿಯಲ್ಲಿ ವಾತಾವರಣ ಪ್ರಕ್ಷುಬ್ದವಾಗಿದೆ.

ಕರಾವಳಿಯ ಕಡಲ ತೀರಗಳಲ್ಲಿ ಭಾರೀ ಗಾತ್ರದ ಅಲೆಗಳು ಅಪ್ಪಳಿಸುತ್ತಿವೆ. ಎಲ್ಲಾ ಕಡಲ ತೀರಗಳಲ್ಲಿಯೂ ಕೂಡ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಉಳ್ಳಾಲ, ಉಚ್ಚಿಲ, ಪಣಂಬೂರು, ತಣ್ಣೀರುಬಾವಿ ಪ್ರದೇಶಗಳಲ್ಲಿ ಕಡಲ್ಕೊರೆತ ಆರಂಭವಾಗಿದೆ. ರಕ್ಕಸ ಗಾತ್ರದ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿವೆ.

ಜಾಹೀರಾತು

ವಾಯುಭಾರ ಕುಸಿತದಿಂದ ರಭಸವಾಗಿ ಗಾಳಿಯೂ ಬೀಸುತ್ತಿದ್ದು, ಮೀನುಗಾರರು ಮತ್ತು‌ ಪ್ರವಾಸಿಗರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.