Saturday, September 21, 2024
ಸುದ್ದಿ

ಮಹಾರಾಷ್ಟ್ರದಲ್ಲಿ ಕಟ್ಟಡ ಕುಸಿತ: ಇಬ್ಬರು ದುರ್ಮರಣ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ- ಕಹಳೆ ನ್ಯೂಸ್

ಬಿವಾಂದಿ: ಮುಂಬೈ ಬಳಿಯ ಬಿವಾಂದಿ ನಗರದಲ್ಲಿನ ಶಾಂತಿನಗರ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ಇಂದು ಬೆಳಗಿನ ಜಾವ ಕುಸಿದು ಬಿದಿದ್ದು, ಇಬ್ಬರು ದುರ್ಮರಣ ಹೊಂದಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಅವಶೇಷಗಳಡಿ ಸಿಲುಕಿದ ಮೂವರನ್ನು ರಕ್ಷಿಸಿದ್ದು, ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನೂ 15 ಮಂದಿ ಜನರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದ್ದು,ಅಗ್ನಿ ಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಜಾಹೀರಾತು