Friday, September 20, 2024
ಸುದ್ದಿ

ಮಾದಕ ವ್ಯಸನದ ವಿರುದ್ಧದ ಜಾಗೃತಿ ಮನೆಯಿಂದಲೇ ಆರಂಭವಾಗಲಿ- ಜಿಲ್ಲಾ ನ್ಯಾಯಾಧೀಶ ಕಡ್ಲೂರ್ ಸತ್ಯನಾರಾಯಣಾಚಾರ್ಯ- ಕಹಳೆ ನ್ಯೂಸ್

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ.ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಹಭಾಗಿತ್ವದಲ್ಲಿ ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಮಂಗಳವಾರ ನಡೆದ ಬ್ರ್ಯಾಂಡ್ ಮಂಗಳೂರು ಯೋಜನೆ ಅಂಗವಾಗಿ `ಶಾಲಾ ಕಾಲೇಜುಗಳಲ್ಲಿ ಕೋಮು ಸೌಹಾರ್ದತೆ ಜಾಗೃತಿ ಹಾಗೂ ಮಾದಕ ದ್ರವ್ಯ, ಸೈಬರ್ ಕ್ರೈಂ ವಿರುದ್ಧ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ನ್ಯಾಯಾಧೀಶ ಕಡ್ಲೂರ್ ಸತ್ಯನಾರಾಯಣಾಚಾರ್ಯ ಅವರು ಸಮಾಜದ ಆಗುಹೋಗುಗಳನ್ನು ಗುರುತಿಸುವ ಮಾಧ್ಯಮ ರಂಗ, ಸಂವಿಧಾನದ ನಿಜವಾದ ನಾಲ್ಕನೇ ಆಧಾರಸ್ತಂಭವಾಗಿ ಕೆಲಸ ಮಾಡಬೇಕು. ಕೋಮು ಸೌಹಾರ್ದತೆ ಬೆಸೆಯುವಲ್ಲಿ ಮಂಗಳೂರು ಬ್ರ್ಯಾಂಡ್ ಆಗಬೇಕು ಪ್ರಸ್ತುತ ಮಾದಕದ್ರವ್ಯ ವ್ಯಸನ ಮಿತಿ ಮೀರಿ ಹರಡುತ್ತಿದ್ದು ಇದರ ಪಿಡುಗನ್ನು ಕಿತ್ತು ಹಾಕಲೇ ಬೇಕು. ಯುವ ಜನತೆಯು ಪಬ್ ಸಂಸ್ಕೃತಿಯಿಂದ ದೂರವಾಗಬೇಕು. ಇಲ್ಲದಿದ್ದರೆ ಯುವಶಕ್ತಿಯನ್ನು ಹಾಳು ಮಾಡುವ ಜೊತೆಗೆ ದೇಶವನ್ನೂ ನಾಶ ಮಾಡಿದಂತಾಗುತ್ತದೆ. ಆದುದರಿಂದ ಮಾದಕ ವ್ಯಸನದ ವಿರುದ್ದ ಜಾಗೃತಿ ಮನೆಯಿಂದಲೇ ಆರಂಭವಾಗಬೇಕು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಗೃತಿ ಪೋಸ್ಟರ್’ ಬಿಡುಡೆಗೊಳಿಸಿ ಮಾತನಾಡಿದ ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ ಮಾದಕ ದ್ರವ್ಯ ಸೇವನೆಯಿಂದ ಕಿಕ್ ಬರುವುದಿಲ್ಲ್ಲ. ಅದರ ಬದಲು ಪ್ರಕೃತಿಯನ್ನು ಆಸ್ವಾದಿಸಿದರೆ ಜೀವನೋಲ್ಲಾಸದ ಕಿಕ್ ಸಿಗಲು ಸಾಧ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಂವೇದನಾಶೀಲರಾಗಿರಬೇಕು ಮಾದಕದ್ರವ್ಯಗಳು ನಮ್ಮನ್ನು ವಾಸ್ತವ ಜಗತ್ತಿನಿಂದ ದೂರ ತಳ್ಳುತ್ತವೆ ಎಂದು ಕಿವಿ ಮಾತು ಹೇಳಿದರು.

ಜಾಹೀರಾತು

ಸೈಬರ್ ಅಪರಾಧ ಎಚ್ಚರಿಕೆ: ಪ್ರಸಕ್ತ ಯುವಜನತೆಗೆ ಮನೆ ಮಂದಿ, ಸ್ನೇಹಿತರಿಗಿಂತ ಮೊಬೈಲ್ ಜೊತೆಗಾರ ಎನಿಸಿಬಿಟ್ಟಿದೆ. ಮೊಬೈಲ್‍ನಲ್ಲಿ ಆಟವಾಡುವುದನ್ನೇ ಶ್ರೇಷ್ಠ ಎಂದು ಭಾವಿಸಿರುವ ಯುವಜನತೆ ಸೈಬರ್ ಅಪರಾಧಗಳಲ್ಲಿ ತೊಡಗಿಕೊಳ್ಳುತ್ತದೆ. ಅಂತರ್ಜಾಲ ಎನ್ನುವುದು ತಳ ಇಲ್ಲದ ಬಾವಿಯಾಗಿದ್ದು, ಯುವಜನತೆ ಆನ್‍ಲೈನ್ ಮನೋವಿಕೃತಿಗೆ ಬಲಿಪಶುವಾಗುತ್ತಿದ್ದಾರೆ. ಜಾತಿ, ಕೋಮುವಾದದಿಂದ ದೂರವಾಗಿ, ಉತ್ತಮ ಭಾರತೀಯರಾಗಿ ರೂಪುಗೊಳ್ಳಬೇಕು. ಜವಾಬ್ದಾರಿ ಯುವ ಪ್ರಜೆಗಳಾಗಿ ಬಾಳಬೇಕು ಎಂದು ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶ ಗಂಗಾಧರ್, ಕೆನರಾ ಕಾಲೇಜು ಆಡಳಿತ ಮಂಡಳಿ ಗೌರವ ಕಾರ್ಯದರ್ಶಿ ರಂಗನಾಥ ಭಟ್, ಕೆನರಾ ಕಾಲೇಜು ಪ್ರಾಂಶುಪಾಲೆ ಡಾ.ಕೆ.ವಿ.ಮಾಲಿನಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿ, ಪ್ತಸ್ತಾವನೆಗೈದರು. ಉಪಾಧ್ಯಕ್ಷ ಪುಷ್ಪರಾಜ್ ಪ್ರತಿಜ್ಞೆ ಬೋಧಿಸಿದರು. ಭಾಸ್ಕರ ರೈ ಕಟ್ಟ ವಂದಿಸಿದರು. ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.