Friday, September 20, 2024
ಸುದ್ದಿ

ಸಿದ್ದರಾಮಯ್ಯ ತವರಲ್ಲಿ ಮೋದಿ ರಣಕಹಳೆ – ಪ್ರಧಾನ ಮಂತ್ರಿಗಳ ವೇಳಾಪಟ್ಟಿ ಏನು ಗೊತ್ತಾ?

Prime Minister Narendra Modi being welcomed by Chief Minister Siddaramaiah, Governor Vajuabai, Rudabai vala, and Union Minister DV Sadanada Gowda at HAL Airport in Bangalore on Tuesday. –KPN ### Modi in Bangalore

ಬೆಂಗಳೂರು: ಹಮ್ ಸಫರ್ ರೈಲು ಮತ್ತು ಹಲವು ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದಾರೆ. ಭಾನುವಾರ ತಡರಾತ್ರಿ 11 ಗಂಟೆಗೆ ಮೋದಿ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ರು.

ಈ ವೇಳೆ ಸಿಎಂ ಸಿದ್ದರಾಮಯ್ಯ ಶಿಷ್ಠಾಚಾರದ ಅನ್ವಯ ಸ್ವಾಗತ ಕೋರಿದ್ರು. ರಾಜ್ಯಪಾಲ ವಜುಭಾಯಿ ವಾಲಾ ಕೂಡ ಮೋದಿಗೆ ಸ್ವಾಗತ ಕೋರಿದ್ರು. ಬಳಿಕ ಮೋದಿ ರ್ಯಾಡಿಸನ್ ಬ್ಲೂ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿದ್ರು. ಮೋದಿ ಆಗಮನಕ್ಕೆ ಕಾಯುತ್ತಿದ್ದ ನೂರಾರು ಅಭಿಮಾನಿಗಳು ಮೋದಿ ಆಗಮಿಸ್ತಿದ್ದಂತೆ ಜಯಘೋಷ ಕೂಗಿದರು. ಮೋದಿ ವಿಮಾನ ನಿಲ್ದಾಣದಿಂದ ನಿರ್ಗಮಿಸ್ತಿದ್ದಂತೆ ಸಿಎಂ ಕೂಡ ತೆರಳಲು ವಿಮಾನ ನಿಲ್ದಾಣದಿಂದ ಹೊರ ಬಂದರು. ಆಗಲೂ ಎಲ್ಲರು ಮೋದಿ ಮೋದಿ ಎಂದು ಘೋಷಣೆ ಕೂಗಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು