Friday, September 20, 2024
ಆರೋಗ್ಯರಾಜ್ಯಸುದ್ದಿ

ಕೊರೊನಾ ವಾರಿಯರ್ಸ್ ಆಗಿ ಮುಂಚೂಣಿಯಲ್ಲಿ ದುಡಿಯುತ್ತಿರುವ ವೈದ್ಯರು ಹಾಗೂ ನರ್ಸ್‌ಗಳಿಗೆ ಸಿಹಿ ಸುದ್ದಿ ; ವೇತನ ಹೆಚ್ಚಿಸಿದ ರಾಜ್ಯ ಸರ್ಕಾರ – ಕಹಳೆ ನ್ಯೂಸ್

ಬೆಂಗಳೂರು, ಜು. 21 : ಕೊರೊನಾ ವಾರಿಯರ್ಸ್ ಆಗಿ ಮುಂಚೂಣಿಯಲ್ಲಿ ದುಡಿಯುತ್ತಿರುವ ವೈದ್ಯರು ಹಾಗೂ ನರ್ಸ್‌ಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯನ್ನು ನೀಡಿದ್ದು ಆಯುಷ್ ಮತ್ತು ಯುನಾನಿ ವೈದ್ಯರ ಹಾಗೂ ನರ್ಸ್‌ಗಳ ತಿಂಗಳ ವೇತನವನ್ನು ಹೆಚ್ಚಳ ಮಾಡಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಮಾಹಿತಿ ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು, ”ಆಯುಷ್ ಮತ್ತು ಯುನಾನಿ ವೈದ್ಯರ ತಿಂಗಳ ಸಂಬಳವನ್ನು 25 ಸಾವಿರದಿಂದ 48,000ಕ್ಕೆ ಏರಿಸಿದ್ದು 6 ತಿಂಗಳ ಕಾಲ ಕರ್ನಾಟಕದ ನರ್ಸ್​ಗಳ ವೇತನವನ್ನು 30 ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ. ಹಾಗೆಇದು ಬಿಬಿಎಂಪಿ, ಆರೋಗ್ಯ, ಆಯುಷ್‌ನ ಎಲ್ಲಾ ನರ್ಸ್‌ಗಳಿಗೆ ಅನ್ವಯವಾಗಲಿದೆ. ಕೊರೊನಾ ಕಾರಣದಿಂದ ತಾತ್ಕಾಲಿಕವಾಗಿ‌ ನೇಮಕ ಮಾಡಲಾಗಿರುವ ಎಂಬಿಬಿಎಸ್​ ವೈದ್ಯರಿಗೆ 80 ಸಾವಿರ ರೂ. ವೇತನ ನೀಡಲಾಗುತ್ತದೆ” ಎಂದು ತಿಳಿಸಿರುವುದಾಗಿ ವರದಿಯಾಗಿದೆ.

ಜಾಹೀರಾತು

ಹಾಗೆಯೇ ಈ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಅಧಿಕ ಹಣ ವಸೂಲಿ ಮಾಡಿದರೆ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು, ”ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲೂ ಆಯುಷ್ಮಾನ್ ಭಾರತ್ ಯೋಜನೆಯಡಿ ದರ ಪಡೆಯಬೇಕು” ಎಂದು ಹೇಳಿದ್ದಾರೆ.