Thursday, March 27, 2025
ಮಂಡ್ಯ

ಯಾರಪ್ಪ ಅವರೆಲ್ಲ? ಅದ್ಯಾರೋ ನನಗೆ ಗೊತ್ತಿಲ್ಲ; ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ-ಕಹಳೆ ನ್ಯೂಸ್

ಮಂಡ್ಯ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು, ಹಣಕಾಸು ವ್ಯವಹಾರವೊಂದರಲ್ಲಿ ಸಿಲುಕಿ, ಸಿಸಿಬಿ ವಿಚಾರಣೆಗೆ ಒಳಪಟ್ಟಿರುವ ಸ್ಯಾಂಡಲ್‍ವುಡ್ ನಟಿ ರಾಧಿಕಾ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಶ್ರೀರಂಗಪಟ್ಟಣದ ನೇರಳೆಕೆರೆ ಗ್ರಾಮಕ್ಕೆ ಆಗಮಿಸಿದ್ದ ಕುಮಾರಸ್ವಾಮಿ ಬಳಿ, ರಾಧಿಕಾಗೆ ಸಿಸಿಬಿ ನೋಟಿಸ್ ಬಂದಿರುವ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡುತ್ತಿದ್ದಂತೆ, ಯಾರಪ್ಪ ಅವರೆಲ್ಲ? ಅದ್ಯಾರೋ ನನಗೆ ಗೊತ್ತಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಅಷ್ಟೇ ಅಲ್ಲ, ನನಗೆ ಸಂಬಂಧಪಡದ ವಿಚಾರ ಕೇಳಲೇಬೇಡಿ ಎನ್ನುತ್ತ ಅಲ್ಲಿಂದ ಹೊರಟೇಹೋದರು. ಇನ್ನು ಕರ್ನಾಟಕವನ್ನು 2023ರ ಹೊತ್ತಿಗೆ ಜನತಾ ರಾಜ್ಯ ಮಾಡುವುದು ಗುರಿ. ಅದಕ್ಕೆ ಏನು ಬೇಕೋ ಅದನ್ನು ಮಾಡುತ್ತೇನೆ, ಉಳಿದ ಯಾವುದಕ್ಕೂ ತಲೆ ಕೆಡಿಸಿಕೊಳ್ಳಲ್ಲ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ