Friday, September 20, 2024
ಬೆಳ್ತಂಗಡಿ

ಇಂದು ಮೈರೋಳ್ತಡ್ಕದಲ್ಲಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ- ಕಹಳೆ ನ್ಯೂಸ್

ಮೈರೋಳ್ತಡ್ಕ: ಬೆಳ್ತಂಗಡಿ ತಾಲೂಕಿನ ಫ್ರೆಂಡ್ಸ್ ಮೈರೋಳ್ತಡ್ಕ ಇದರ ವತಿಯಿಂದ ಇಂದು 7ಗಂಟೆಗೆ ದ್ವಿತೀಯ ವರ್ಷದ MVL-2021 ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ನಡೆಯಲಿದೆ. ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮೈರೋಳ್ತಡ್ಕದ ಕ್ರೀಡಾಂಗಣದಲ್ಲಿ ವಲಯ ಮಟ್ಟದ 8ತಂಡಗಳ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ ನೆರವೇರಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಆಗಮಿಸಲಿದ್ದಾರೆ. ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದಪ್ಪ ಪೂಜಾರಿ ಬೊಲೋಡಿ, ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಸದಸ್ಯ ಕೃಷ್ಣಯ್ಯ ಆಚಾರ್ಯ, ಬಂದಾರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ, ತಣ್ಣೀರುಪಂತ ಪಂಚಾಯತ್ ಮಾಜಿ ಅಧ್ಯಕ್ಷ ವಿಕ್ರಮ್ ಕಲ್ಲಾಪು, ಪದ್ಮುಂಜ ಸಿ.ಎ.ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪನೆಕ್ಕರ್, ಪ್ರವೀಣ್ ಪೊರ್ಕಲ್ ಸಿ.ಎ.ಬ್ಯಾಂಕ್ ಬಾರ್ಯ, ಶೀನಪ್ಪ ಗೌಡ ಪ್ರಗತಿಪರ ಕೃಷಿಕರು ಮೈರೋಳ್ತಡ್ಕ, ಪ್ರಶಾಂತ್ ಹೊಳ್ಳ ಪ್ರಧಾನ ಅರ್ಚಕರು, ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಪೆರ್ಲ-ಬೈಪಾಡಿ ಉಪಸ್ಥಿತರಿರಲಿದ್ದಾರೆ. ಪ್ರಗತಿಪರ ಕೃಷಿಕರಾದ ಶ್ರೀಪತಿ ಭಟ್, ಮುಂಡೂರು ಕ್ರೀಡಾಂಗಣ ಉದ್ಘಾಟನೆಯನ್ನ ನೆರವೇರಿಸಲಿದ್ದಾರೆ.

ಜಾಹೀರಾತು