Saturday, September 21, 2024
ಸುದ್ದಿ

Breaking News : ಸಪ್ತಪದಿ ತುಳಿಯುತ್ತಿದ್ದ ಮದುಮಗಳ ಕತ್ತಿಗೆ ಇರಿದ ಭಗ್ನಪ್ರೇಮಿ – ಕಹಳೆ ನ್ಯೂಸ್

ಸಾಗರ : ಮಾಂಗಲ್ಯ ಧಾರಣೆ ನಡೆದು, ಸಪ್ತಪದಿ ತುಳಿಯುತ್ತಿದ್ದಾಗಲೇ ಮದುಮಗಳ ಮೇಲೆ ಭಗ್ನ ಪ್ರೇಮಿ ನಂದನ್ ಎಂಬಾತ ಮದುಮಗಳ ಕುತ್ತಿಗೆಗೆ ಚಾಕು ಇರಿದ ಘಟನೆ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. 

ಭೀಮನಕೋಣೆ ಕಾಪ್ಟೆಮನೆಯಲ್ಲಿ ವರನ ಸ್ವಗೃಹದಲ್ಲಿ ಭರತ್ ಎಂಬುವವರ ಜೊತೆ ಸಂಗೀತಾ (ಹೆಸರು ಬದಲಾಯಿಸಿದೆ) ಮದುವೆ ಕಾರ್ಯಕ್ರಮ ನಡೆಯುತ್ತಿತ್ತು. ಮಾಂಗಲ್ಯ ಧಾರಣೆ ಕಾರ್ಯಕ್ರಮ ನಡೆದು ಬಳಿಕ ನವ ಜೋಡಿ ಸಪ್ತಪದಿ ಶಾಸ್ತ್ರವನ್ನು ಪೂರೈಸುತ್ತಿದ್ದರು. ಈ ಸಂದರ್ಭದಲ್ಲಿ ಅಲ್ಲೇ ಇದ್ದ ಭಗ್ನ ಪ್ರೇಮಿ ನಂದನ್ ಮದುಮಗಳ ಕತ್ತಿಗೆ ಚಾಕುವಿನಿಂದ ಇರಿದಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದರಿಂದ ಗಾಬರಿಗೊಂಡ ಸಂಬಂಧಿಕರು ಹಾಗೂ ಹುಡುಗಿಯ ಚಿಕ್ಕಪ್ಪ ಗಂಗಾಧರಪ್ಪ ತಡೆಯಲು ಬಂಧಿದ್ದಾರೆ. ಆಗ ಆತ ಗಂಗಾಧರಪ್ಪನ ಮೇಲೂ ಹಲ್ಲೆ ಮಾಡಿದ್ದಾನೆ. ಆರೋಪಿ ನಂದನ್ ಶಿವಮೊಗ್ಗದ ನಿವಾಸಿಯಾಗಿದ್ದು, ಸುಮಾರು 6 ತಿಂಗಳಿಂದ ಸಂಗೀತಾಳನ್ನು ಪ್ರೀತಿ ಮಾಡುತ್ತಿದ್ದನು ಎನ್ನಲಾಗಿದೆ. ಆದರೆ ಸಂಗೀತಾ ಈತನ ಪ್ರೀತಿಯನ್ನು ನಿರಾಕರಿಸಿದ್ದಳು. ತನ್ನನ್ನು ಬಿಟ್ಟು ಬೇರೆಯವರನ್ನು ಜೊತೆ ಮದುವೆಯಾಗುತ್ತಿದ್ದಾಳೆ ಎಂದು ಆಕ್ರೋಶಗೊಂಡು ಈ ರೀತಿ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಇನ್ನು ಇರಿತಕ್ಕೆ ಒಳಗಾದ ಸಂಗೀತಾ ಹಾಗೂ ಗಂಗಾಧರಪ್ಪ ಅವರನ್ನು ಸಾಗರ್ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಇತ್ತ ಆರೋಪಿಯನ್ನು ಸಂಬಂಧಿಕರು ಗ್ರಾಮಾಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಜಾಹೀರಾತು