
ಮೂಡುಬಿದಿರೆ : ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಆಶ್ರಯದಲ್ಲಿ “ವಾಯ್ಸ್ ಆಫ್ ಆರಾಧನಾ ಅವಾರ್ಡ್-2021” ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಇ0ದು ಸಮಾಜ ಮಂದಿರದಲ್ಲಿ ನಡೆಯಿತು.ಈ ಕಾರ್ಯಕ್ರಮದ ಉದ್ಘಾಟನೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ಹಾಗು ಕಟೀಲ್ ಕ್ಷೇತ್ರದ ಕಮಲಾದೇವಿ ಅಸ್ರಣ್ಣ ರವರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.ಈ ಸಂದರ್ಭದಲ್ಲಿ ಉದ್ಯಮಿ ರವೀಂದ್ರ ಪೈ, ಪತ್ರಕರ್ತರಾದ ಹರೀಶ್ ಆದೂರು, ಶೇಖರ್ ಅಜೆಕಾರ್, ಮಜಾಭಾರತ ಖ್ಯಾತಿಯ ಆರಾಧನಾ ಭಟ್ ಮತ್ತಿತರರು ಉಪಸ್ಥಿತರಿದ್ದರು.