Recent Posts

Monday, April 7, 2025
ಕಡಬ

ಕಡಬ ತಾಲೂಕಿನ ಯುವತಿ ನೇಣು ಬಿಗಿದು ಆತ್ಮಹತ್ಯೆ-ಕಹಳೆ ನ್ಯೂಸ್

ಕಡಬ : ಕಡಬ ತಾಲೂಕಿನ ರೆಂಜಿಲಾಡಿ ಎಂಬಲ್ಲಿ ಸೋಮವಾರದಂದು ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ರೆಂಜಿಲಾಡಿ ಗ್ರಾಮದ ಹೊಸಮನೆ ನಿವಾಸಿ ಚೆನ್ನಪ್ಪ ಗೌಡ ಎಂಬವರ ಪುತ್ರಿ 25 ವರ್ಷದ ಪುಷ್ಪಲತಾ ಯಾನೆ ದೀಕ್ಷಾ ಎಂದು ಗುರುತಿಸಲಾಗಿದೆ.

ಈಕೆ ಕಡಬದ ಶೋರೂಂ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ವೈಯಕ್ತಿಕ ಕಾರಣಕ್ಕಾಗಿ ತನ್ನ ಮನೆ ಸಮೀಪ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ