ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ಮಗುವಿಗೆ ನೆರವಾದ ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ – ಕಹಳೆ ನ್ಯೂಸ್
ಪುತ್ತೂರು : ಲಿವರ್ ಸಮಸ್ಯೆಯಿಂದ ಬಳಲುತ್ತಿರುವ 7 ತಿಂಗಳ ಮಗುವಿಗೆ ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ನೆರವಾಗಿದ್ದಾರೆ.
ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಉಳಿಯತ್ತಡ್ಕ ನಿವಾಸಿ ರವಿಚಂದ್ರ ಪೂಜಾರಿಯವರ ೭ ತಿಂಗಳ ಮಗು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಈ ಮಗುವಿನ ಚಿಕಿತ್ಸೆಗೆ ಉದ್ಯಮಿ, ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಆರ್ಥಿಕ ನೆರವಿನ ಚೆಕ್ಕನ್ನು ಹಸ್ತಾಂತರಿಸಿದರು.