Friday, September 20, 2024
ಸುದ್ದಿ

ಜು.15ರಂದು 34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯ ಕಸತ್ಯಾಜ್ಯ ವಿಲೇವಾರಿ ಸಮಾಲೋಚನಾ ಸಭೆ – ಕಹಳೆ ನ್ಯೂಸ್

ಪುತ್ತೂರು: 34 ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಸತ್ಯಾಜ್ಯ ವಿಲೇವಾರಿ ಮಾಡುವ ಉದ್ದೇಶಕ್ಕಾಗಿ ಶಾಂತಿನಗರದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಗೊಂಡಿದ್ದು, ತ್ಯಾಜ್ಯ ವಿಲೇವಾರಿಗಾಗಿ ವಾಹನ ವ್ಯವಸ್ಥೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ನಿಟ್ಟಿನಲ್ಲಿ 34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯ ಮನೆ, ಕಟ್ಟಡ, ಅಂಗಡಿ ಮುಂಗಟ್ಟುಗಳಿAದ ಒಣ ಮತ್ತು ಹಸಿ ಕಸವನ್ನು ಸಂಗ್ರಹಣೆ ಮಾಡುವ ಬಗ್ಗೆ ಅಭಿಪ್ರಾಯ ಪಡೆಯಲು ಗ್ರಾಮಪಂಚಾಯತ್ ಹಾಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಈ ಹಿಂದೆ ಗ್ರಾ.ಪಂ.ನಲ್ಲಿ ಕರ್ತವ್ಯ ನಿರ್ವಹಿಸಿದ್ದ ಅಧ್ಯಕ್ಷ, ಉಪಾಧ್ಯಕ್ಷರುಗಳ ಉಪಸ್ಥಿತಿಯಲ್ಲಿ ಜು.15ರಂದು ಬೆಳಿಗ್ಗೆ 10:30ಕ್ಕೆ 34 ನೆಕ್ಕಿಲಾಡಿ ಗ್ರಾ.ಪಂ. ಸಭಾಭವನದಲ್ಲಿ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ ಎಂದು ಗ್ರಾ.ಪಂ.ಅಧ್ಯಕ್ಷ ಪ್ರಶಾಂತ್ ಎನ್. ತಿಳಿಸಿದ್ದಾರೆ.

ಜಾಹೀರಾತು