Friday, September 20, 2024
ರಾಜಕೀಯ

ಕಾಂಗ್ರೆಸ್ ಕಾರ್ಯಕರ್ತರ ಜನ್ಮ ಜಲಾಡಿದ ಕಿಶೋರ್ ಕುಮಾರ್ ಪುತ್ತೂರು – ಕಹಳೆ ನ್ಯೂಸ್

ಮಂಗಳೂರು : ಮನೆಗಳಿಗೆ ಬಿಜೆಪ ಅಭ್ಯರ್ಥಿ ವೇದವ್ಯಾಸ ಕಾಮತ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪತ್ರಿಕೆ ಯನ್ನು ಹಂಚುತ್ತಿದ್ದ ಇಬ್ಬರು ಯುವಕರನ್ನು ಬಿಜೆಪಿ ಕಾರ್ಯಕರ್ತರು ಹಿಡಿದು ಕದ್ರಿ ಪೋಲಿಸ್ ಠಾಣೆಗೆ ಒಪ್ಪಿಸಿದರು.

ಈ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಪೋಲೀಸರ ಮೇಲೆ ಒತ್ತಡ ಹೇರಿ ಯುವಕರನ್ನು ಬಿಟ್ಟು ಅವರನ್ನು ಹಿಡಿದುಕೊಟ್ಟ ಬಿಜೆಪಿ ಕಾರ್ಯಕರ್ತರ ಮೇಲೆ ಕ್ರಮ ತೆಗೆದುಕೊಳ್ಳಲು ಒತ್ತಡ ಹೇರುತ್ತಿದ್ದ ವೇಳೆ ಅಲ್ಲಿಗೆ ಆಗಮಿಸಿ ಪೋಲೀಸರ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕಿಶೋರ್ ಕುಮಾರ್ ಪುತ್ತೂರು ಅವರು ಅರ್ಭಟಿಸಲು ಆರಂಭಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು


ಇದರಿಂದ ಬೆದರಿದ ಕಾಂಗ್ರೆಸ್ ಕಾರ್ಯಕರ್ತರು ಕಿಶೋರ್ ಈ ಚಿಕ್ಕ ವಿಷಯಕ್ಕೆ ನೀವು ರಾಜ್ಯ ನಾಯಕರು ಬರಬೇಕಾಗಿರಲಿಲ್ಲ, ಎಂದು ಶಾಂತಿಯಿಂದ ಮಾತುಕತೆಗೆ ಬಂದರು ಎನ್ನಲಾಗಿದೆ. ಕೊನೆಗೆ ಬಿಜೆಪಿ ಕಾರ್ಯಕರ್ತರನ್ನು ಬಿಟ್ಟು ಕರಪತ್ರ ಹಂಚಿದ ಯುವಕರ ಮೇಲೆ ಕೇಸು ದಾಖಲಿಸುವಂತೆ ಪ್ರಕರಣವನ್ನು ಇತ್ಯರ್ಥ ಮಾಡಲಾಯಿತು.

ಜಾಹೀರಾತು