Recent Posts

Sunday, September 22, 2024
ಬೆಂಗಳೂರು

ಬೆಂಗಳೂರು: ಅಪಾರ್ಟ್‍ಮೆಂಟ್ ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ; ಸಾವು- ಕಹಳೆ ನ್ಯೂಸ್

ಆನೆಕಲ್: ವಿದ್ಯಾರ್ಥಿನಿಯೋರ್ವಳು ಅಪಾರ್ಟ್‍ಮೆಂಟ್‍ನ 12ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ ವೇಣುಗೋಪಾಲ ನಗರದಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ವೇಣುಗೋಪಾಲ ನಗರದ ನಿತೀಶ್ ಪಾರ್ಕ್ ಅಪಾರ್ಟ್‍ಮೆಂಟ್‍ನ 12ನೇ ಮಹಡಿಯಿಂದ ಬಿದ್ದು 13 ವರ್ಷದ ವೈಷ್ಣವಿ ಸಾವನ್ನಪ್ಪಿದ್ದು, ಮೃತ ದುರ್ದೈವಿ ಉತ್ತರಪ್ರದೇಶ ಮೂಲದ ವೀರೇಂದ್ರಕುಮಾರ್ ಹಾಗೂ ಸುಮನ್ ದಂಪತಿಯ ಪುತ್ರಿ. ಕಳೆದ 20 ವರ್ಷದಿಂದ ಈ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿದೆ. ವೈಷ್ಣವಿ ಖಾಸಗಿ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ರಾತ್ರಿ ಕುಟುಂಬದವರ ಜೊತೆ ಕುಳಿತು ಊಟ ಮಾಡಿದ್ದಳು. ಮನೆಯವರೆಲ್ಲರೂ ಹಾಲ್ ನಲ್ಲಿ ಕುಳಿತಿದ್ದರು. ಬಾಲ್ಕನಿಯಲ್ಲಿ ಲಾಕ್ ಮಾಡಿಕೊಂಡು ಆಟವಾಡುತ್ತಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ವಿಡಿಯೋ ನೋಡಿ: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಕೆರೆಯಲ್ಲಿ ವರುಣ ದೇವರ ವಿಗ್ರಹ ; ಅಷ್ಟಮಂಗಲ ಪ್ರಶ್ನಾಚಿಂತನೆಯಲ್ಲಿ ನುಡಿದ ದೈವಜ್ಞರು

ಜಾಹೀರಾತು

ಏನೋ ಬಿದ್ದ ರೀತಿ ಶಬ್ದ ಆದಾಗ ಬಾಲ್ಕನಿ ಬಳಿ ಹೋಗಿ ನೋಡಿದಾಗ ಮಗಳು ಬಿದ್ದಿರುವುದು ಗೊತ್ತಾಗಿದೆ. ಬಾಲ್ಕನಿ ಬಳಿ ಬಂದು ನೋಡಿದಾಗ ವೈಷ್ಣವಿ ಕೆಳಗೆ ಬಿದ್ದಿದ್ದಳು. ತಲೆಗೆ ತೀವ್ರ ಪೆಟ್ಟಾದ ಕಾರಣ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈ ಬಗ್ಗೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ತನಿಖೆ ನಡೆಸುತ್ತಿದ್ದಾರೆ.