Recent Posts

Sunday, September 22, 2024
ದಕ್ಷಿಣ ಕನ್ನಡಸುದ್ದಿ

ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ತಂಡಕ್ಕೆ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದ ಮಾಲಾಡಿ ಗ್ರಾಮ ಪಂಚಾಯತ್ ಪಿ.ಡಿ.ಓ…!!- ಕಹಳೆ ನ್ಯೂಸ್

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬರು ಎಸಿಬಿ ತಂಡಕ್ಕೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಮಾಲಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಪಂಚಾಯತ್ ವ್ಯಾಪ್ತಿಯಲ್ಲಿ ವಾಸ್ತವ್ಯವಿರುವಂತಹ ವ್ಯಕ್ತಿಯೋರ್ವರಿಂದ ಪಂಚಾಯತ್ ಆಸ್ತಿ ದಾಖಲೆ ಇ ಸ್ವತ್ತು 9 ಮತ್ತು 11 ಎ ನಮೂನೆಯನ್ನು ಮಾಡಲು 15,000 ರೂ. ಲಂಚವನ್ನು ಪಿ.ಡಿ.ಓ. ರವಿ ಸ್ವೀಕರಿಸುತ್ತಿದ್ದ ವೇಳೆಗೆ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ನೇತೃತ್ವದಲ್ಲಿ ಧಿಡೀರ್ ಆಗಿ ಬೇಟಿ ನೀಡಿದ ದಕ್ಷಿಣ ಕನ್ನಡ ಭ್ರಷ್ಟಾಚಾರ ನಿಗ್ರಹ ದಳವು ಆರೋಪಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದು, ವಶಕ್ಕೆ ಪಡೆದು ವಿಚಾರಣೆಯನ್ನು ನಡೆಸುತ್ತಿದ್ದಾರೆ.