Recent Posts

Saturday, September 21, 2024
ದಕ್ಷಿಣ ಕನ್ನಡಸುದ್ದಿ

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ದೇರೆಬೈಲ್ ನೈರುತ್ಯ 26ನೇ ವಾರ್ಡಿನ ವಾರ್ಡ್ ಸಭೆ- ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ದೇರೆಬೈಲ್ ನೈರುತ್ಯ 26ನೇ ವಾರ್ಡಿನ ವಾರ್ಡ್ ಸಭೆಯು ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ ಯವರ ಅದ್ಯಕ್ಷತೆಯಲ್ಲಿ ಮಾರಿಗುಡಿ ಬಳಿಯ ಶ್ರೀ ರಾಧಾಕೃಷ್ಣ ಮಂದಿರದಲ್ಲಿ ಜರುಗಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಮಂಡಲ ಉಪಾಧ್ಯಕ್ಷರು ಹಾಗೂ ಉತ್ತರ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ರಮೇಶ್ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ ಯವರು ವಾರ್ಡ್ ಮಟ್ಟದಲ್ಲಿ ಪಕ್ಷ ಸಂಘಟನೆ ಹಾಗೂ ಬಲವರ್ಧನೆ ಹಾಗೂ ಮುಂದಿನ ವಿಧಾನಸಭಾ ಚುನಾವಣೆಗೆ ಯಾವ ರೀತಿ ಸಜ್ಜಾಗಬೇಕು ಎಂದು ಸಲಹೆ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೆ ,ಮಂಡಲ ಉಪಾಧ್ಯಕ್ಷರಾದ ದೀಪಕ್ ಪೈ, ಅಜಯ ಕುಲಶೇಖರ್,ಮ ನ ಪಾ ಸದಸ್ಯರಾದ ಗಣೇಶ್ ಕುಲಾಲ್, ಮಂಡಲ ಕಾರ್ಯದರ್ಶಿಗಳಾದ ಲಲ್ಲೇಶ್ , ಶ್ರೀಮತಿ ಅಮಿತಾಕಲಾ, ಉತ್ತರ ಮಹಾಶಕ್ತಿ ಕೇಂದ್ರದ ಉಪಾಧ್ಯಕ್ಷರಾದ ಕಿಶೋರ್, ಸಾಮಾಜಿಕ ಜಾಲತಾಣ ಮಂಡಲ ಸಂಚಾಲಕರಾದ ನಿಲೇಶ್ ಕಾಮತ, ವಾರ್ಡಿನ ಶಕ್ತಿ ಕೇಂದ್ರ ಪ್ರಮುಖರಾದ ರಜತ್ ಕುಲಾಲ್ ಹಾಗೂ ನಿತಿನ್ ಉರ್ವ, ಮಂಡಲ ಸಮಿತಿ ಸದಸ್ಯರು, ಬೂತ್ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು. ದೀಕ್ಷಿತ್ ಸ್ವಾಗತಿಸಿ ರಜತ್ ಕುಲಾಲ್ ವಂದಿಸಿದರು.