Recent Posts

Saturday, September 21, 2024
ದಕ್ಷಿಣ ಕನ್ನಡಸುದ್ದಿ

ಕೋವಿಡ್ ಸೋಂಕಿನಿಂದ ಮೃತಪಟ್ಟ ಬೋಳೂರು ವಾರ್ಡುನ ಕುಟುಂಬಕ್ಕೆ ಪರಿಹಾರ ಧನ ಹಸ್ತಾಂತರಿಸಿದ ಶಾಸಕ ವೇದವ್ಯಾಸ್ ಕಾಮತ್- ಕಹಳೆ ನ್ಯೂಸ್

ಮಂಗಳೂರು: ಕೋವಿಡ್ ಸೋಂಕಿನಿಂದ ಮೃತಪಟ್ಟವರಿಗೆ ರಾಜ್ಯ ಸರಕಾರವು ಘೋಷಿಸಿರುವ 1 ಲಕ್ಷ ಪರಿಹಾರ ಧನವನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಬೋಳೂರು ವಾರ್ಡುನ ಕುಟುಂಬಕ್ಕೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಪಾಲಿಕೆ ಸದಸ್ಯರುಗಳಾದ ಗಣೇಶ್ ಕುಲಾಲ್, ಜಯಾನಂದ ಅಂಚನ್, ಜಯಲಕ್ಷ್ಮಿ ಶೆಟ್ಟಿ, ಭರತ್ ಸೂಟರ್ ಪೇಟೆ, ಸಂಧ್ಯಾ ಮೋಹನ್ ಆಚಾರ್, ವೀಣಾ ಮಂಗಲ, ಚಂದ್ರಾವತಿ ವಿಶ್ವನಾಥ್, ರೂಪಶ್ರೀ ಪೂಜಾರಿ, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ರೂಪಾ ಡಿ ಬಂಗೇರ, ಅಜಯ್ ಕುಲಶೇಖರ, ಕಿರಣ್ ರೈ ಎಕ್ಕೂರು, ಲಲ್ಲೇಶ್ ಅತ್ತಾವರ,ಮೋಹನ್ ಪೂಜಾರಿ, ಚರಿತ್ ಪೂಜಾರಿ, ಮೋಹನ್ ಆಚಾರ್, ಚಂದ್ರಶೇಖರ ಬಜಾಲ್, ಅಮರ್, ಅಜಿತ್ ಡಿ.ಸಿಲ್ವ ಮುಂತಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು