Saturday, September 21, 2024
ಸುದ್ದಿ

Breaking News : ಹೆಲ್ಮೆಟ್ ಧರಿಸದೇ ಉಪ್ಪಿನಂಗಡಿಯಲ್ಲಿ ಸಂಚರಿಸುತ್ತಿದ್ದುದನ್ನು ಪ್ರಶ್ನಿಸಿದ ಪೋಲಿಸರ ಮೇಲೆ ಹಲ್ಲೆಗೆ ಮುಂದಾದ ಸವಾರ ಪುಂಡ ಸಿದ್ದಿಕ್ ! – ಕಹಳೆ ನ್ಯೂಸ್

ಉಪ್ಪಿನಂಗಡಿ : ಪ್ರಧಾನ ರಸ್ತೆಯಲ್ಲಿ ಆದಿತ್ಯವಾರ ಮಧ್ಯಾಹ್ನದಂದು ಕರ್ತವ್ಯ ನಿರತ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ಧರಿಸದೆ ಸಂಚರಿಸುತ್ತಿದ್ದ ವಾಹನ ಸವಾರರನ್ನು ಕಾನೂನು ಕ್ರಮಕ್ಕೆ ಒಳಪಡಿಸುವ ಪ್ರಕ್ರಿಯೆಯಲ್ಲಿ ತೊಡಗಿದ್ದರು. ಈ ವೇಳೆ ಹೆಲ್ಮೆಟ್ ರಹಿತ ಸಂಚಾರದಲ್ಲಿದ ಸಿದ್ದಕ್ ಎಂಬವರ ವಾಹನದ ಕೀಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರೆಂದೂ, ಈ ಕ್ರಮಕ್ಕೆ ಆಕ್ಷೇಪಿಸಿದ ಸಿದ್ದಕ್ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದು ಕರ್ತವ್ಯಕ್ಕೆ ಅಡ್ಡಿ ಪಡಿಸಿದರೆಂದೂ, ಟ್ರಾಫಿಕ್ ಎಎಸೈ ರುಕ್ಮಯ ಗೌಡ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.

ಪೊಲೀಸ್ ಅಧಿಕಾರಿ ಸಲ್ಲಿಸಲ್ಪಟ್ಟ ದೂರು ರಾತ್ರಿವರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಗದೆ ಮುಂದಿನ ಕ್ರಮಕ್ಕಾಗಿ ಪುತ್ತೂರು ನಗರ ಠಾಣೆಗೆ ವರ್ಗಾಯಿಸಲ್ಪಟ್ಟಿದೆ ಎಂದು ಉಪ್ಪಿನಂಗಡಿ ಪೊಲೀಸರು ತಿಳಿಸಿದ್ದಾರೆ. ಪೊಲೀಸರೊಂದಿಗೆ ವಾಗ್ವಾದ ನಡೆಯುತ್ತಿದ್ದ ದೃಶ್ಯವನ್ನು ಪೊಲೀಸ್ ಇಲಾಖೆಯು ವಿಡಿಯೋ ಚಿತ್ರೀಕರಣ ಮಾಡಿದ್ದು, ಉನ್ನತ ಪೊಲೀಸ್ ಅಧಿಕಾರಿಗಳು ಸದ್ರಿ ವಿಡಿಯೋ ಪರಿಶೀಲಿಸುತ್ತಿದ್ದಾರೆಂದು ತಿಳಿದು ಬಂದಿದೆ. ವಾಗ್ವಾದ ಜೋರಾಗುತ್ತಿದ್ದಂತೆ ಪೋಲಿಸರ ಮೇಲೆ ಈತ ಹಲ್ಲೆ ಮುಂದಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಈತನ ಪುಂಡಾಟಿಕೆಗೆ ಪೋಲಿಸ್ ಇಲಾಖೆ ಕಡಿವಾಣ ಹಾಕಲೇ ಬೇಕು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು