Recent Posts

Saturday, September 21, 2024
ದಕ್ಷಿಣ ಕನ್ನಡಸುದ್ದಿ

63 ಲಕ್ಷ ರೂಪಾಯಿ ವೆಚ್ಚದಲ್ಲಿ ಬಂಗ್ರಕೂಳೂರು ವಾರ್ಡ್ 16ರಲ್ಲಿ ಕಲ್ಲಕಂಡ ಉದ್ಯಾನವನದ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೇರವೇರಿಸಿದ .ಡಾ.ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು: ಕರ್ನಾಟಕ ಸರಕಾರದ 15ನೇ ಹಣಕಾಸು ಯೋಜನೆ 20-21 ರಡಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಬಂಗ್ರಕೂಳೂರು ವಾರ್ಡ್,ಕೋಡಿಕಲ್ ಪ್ರದೇಶದ ಕಲ್ಲಕಂಡ ಉದ್ಯಾನವನ ಅಭಿವೃದ್ಧಿಗೆ ಮಂಗಳೂರು ಉತ್ತರ ಶಾಸಕರಾದ ಡಾ ಭರತ್ ಶೆಟ್ಟಿ ಯವರು ಗುದ್ದಲಿ ಪೂಜೆ ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು


ಈ ಸಂದರ್ಭದಲ್ಲಿ ಸ್ಥಳೀಯ ಮನಪಾ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್,17 ನೇ ವಾರ್ಡ್ ಮನಪಾ ಸದಸ್ಯರಾದ ಮನೋಜ್ ಕುಮಾರ್, ಪೈ ಲ್ಯಾಂಡ್ ಕನ್ಸಲ್ ಟೆನ್ಸ್ ವೆಂಕಟೇಶ್ ಪೈ,ಗುತ್ತಿಗೆದಾರ ರಾದ ಲೋಕೇಶ್,ಮನಪಾ ಇಂಜಿನಿಯರ್ ಅಬ್ದುಲ್ ಖಾದರ್,ಬಿಜೆಪಿ ಶಕ್ತಿಕೇಂದ್ರ ಪ್ರಮುಖರಾದ, ಉಮೇಶ್ ಮಲರಾಯಸಾನ, ಹರಿಪ್ರಸಾದ್ ಶೆಟ್ಟಿ, ಬೂತ್ ಅಧ್ಯಕ್ಷರಾದ ಯಾತೀಶ್ ಕುಮಾರ್,ಪಕ್ಷದ ಪ್ರಮುಖರು,ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಜಾಹೀರಾತು