Saturday, September 21, 2024
ರಾಜಕೀಯ

ರಾಜ್ಯದ ಮೂವರು ಸಂಸದರ ರಾಜೀನಾಮೆ ಅಂಗೀಕಾರ – ಕಹಳೆ ನ್ಯೂಸ್

ಮೇ ,29 : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ಬಳಿಕ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಶಿವಮೊಗ್ಗ ಸಂಸದ ಬಿ.ಎಸ್.​ ಯಡಿಯೂರಪ್ಪ, ಬಳ್ಳಾರಿ ಸಂಸದ ಶ್ರೀರಾಮುಲು ಹಾಗೂ ಮಂಡ್ಯ ಸಂಸದ ಪುಟ್ಟರಾಜು ಅವರ ರಾಜೀನಾಮೆ ಅಂಗೀಕಾರವಾಗಿದೆ. ಲೋಕಸಭೆ ಸ್ಪೀಕರ್​ ಸುಮಿತ್ರಾ ಮಹಾಜನ್​ ಅವರಿಗೆ ಈ ಮೂವರು ಸಲ್ಲಿಸಿದ್ದ ರಾಜೀನಾಮೆ ಅಂಗೀಕಾರವಾಗಿದ್ದು, ಈ ಬಗ್ಗೆ ರಾಜ್ಯ ಪತ್ರದಲ್ಲಿ ಅಧಿಸೂಚನೆಯನ್ನೂ ಹೊರಡಿಸಲಾಗಿದೆ.

ಶಿವಮೊಗ್ಗ ಸಂಸದರಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾದರೆ, ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಶ್ರೀರಾಮುಲು ಹಾಗೂ ಮೇಲುಕೋಟೆ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್​ ಮುಖಂಡ ಪುಟ್ಟರಾಜು ಶಾಸಕರಾಗಿ ಆಯ್ಕೆಯಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು