Recent Posts

Saturday, September 21, 2024
ಕುಂದಾಪುರಸುದ್ದಿ

ಮೊಬೈಲ್ ಆ್ಯಪ್ ಮೂಲಕ ಪಡೆದ ಸಾಲ ಮರುಪಾವತಿಸಲಾಗದೇ ಮನನೊಂದು ಯುವಕ ಆತ್ಮಹತ್ಯೆ – ಕಹಳೆ ನ್ಯೂಸ್

ಕುಂದಾಪುರ : ಲೋನ್ ಬಾಕಿ ಇದೆ ಎಂದು ಕರೆ ಬಂದ್ರೆ ನಾನು ಸತ್ತು ಹೋಗಿದ್ದೇನೆ ಎಂದು ಹೇಳಿ ! ಎಂದು ಡೆತ್ ನೋಟ್ ಬರೆದಿಟ್ಟು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಹೆಮ್ಮಾಡಿಯಲ್ಲಿ ನಡೆದಿದೆ.

ಕುಂದಾಪುರದ ಹೆಮ್ಮಾಡಿಯ ನಿವಾಸಿಯಾಗಿರುವ ವಿಘ್ನೇಶ್ ಎಂಎನ್ ಸಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ತನ್ನ ಸ್ನೇಹಿತರೊಂದಿಗೆ ಬಿಸಿನೆಸ್ ಆರಂಭಿಸಲು ಮೊಬೈಲ್ ಆಪ್ ಮೂಲಕ ಸಾಲ ಮಾಡಿದ್ದು, ಸಾಲ ಮರುಪಾವತಿ ಮಾಡಲಾಗದೇ ಡೆತ್ ನೋಟ್ ಬರೆದಿಟ್ಟು ಮನೆಯ ಮುಂಭಾಗದಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಡೆತ್ ನೋಟ್ ನಲ್ಲಿ ತಾನು ಸಾಲ ಮಾಡಿಕೊಂಡಿದ್ದಾಗಿ ಬರೆದಿರುವ ವಿಘ್ನೇಶ್ ಲೋನ್ ಬಾಕಿ ಇದೆ ಎಂದು ಕರೆ ಬಂದರೆ ನಾನು ಸತ್ತು ಹೋಗಿದ್ದೆನೆ ಎಂದು ತಿಳಿಸಿ ಎಂದು ಬರೆದಿದ್ದಾನೆ. ಅಲ್ಲದೆ ಈ ತಿಂಗಳ ಸಂಬಳ ಬ್ಯಾಂಕ್ ಅಕೌಂಟ್‍ಗೆ ಬರುತ್ತದೆ ಎಟಿಎಂ ಪಾಸ್ವರ್ಡ್ ಅನ್ನು ಡೆತ್ ನೋಟಿನಲ್ಲಿ ಬರೆದಿದ್ದಾನೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.