Recent Posts

Saturday, September 21, 2024
ದಕ್ಷಿಣ ಕನ್ನಡಸುದ್ದಿ

ಕೊರೊನಾ ವೈರಸ್‍ನಿಂದ ಮೃತಪಟ್ಟ ಸಂತ್ರಸ್ತ ಕುಟುಂಬದ ಸದಸ್ಯರಿಗೆ ಪರಿಹಾರ ಧನ ವಿತರಿಸಿದ ಶಾಸಕ ಡಾ. ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್

ಕೊರೊನಾ ವೈರಸ್‍ನಿಂದ ಮೃತಪಟ್ಟ ಸಂತ್ರಸ್ತ ಕುಟುಂಬದ ಸದಸ್ಯರಿಗೆ ಕೇಂದ್ರ ಹಾಗೂ ರಾಜ್ಯ ಸರಕಾರ ಬಿಡುಗಡೆ ಮಾಡಿದ ಪರಿಹಾರ ಧನವನ್ನು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಭರತ್ ಶೆಟ್ಟಿ ವೈ ಅವರು ಶುಕ್ರವಾರ ವಿತರಿಸಿದರು. ಗುರುಪುರದ ನಾಡಕಚೇರಿಯಲ್ಲಿ ಒಟ್ಟು 27 ಸಂತ್ರಸ್ತ ಕುಟುಂಬಗಳಿಗೆ ಪರಿಹಾರದ ಚೆಕ್ ವಿತರಿಸಲಾಯಿತು.


ಈ ಸಂದರ್ಭ ಮಾತನಾಡಿದ ಶಾಸಕರು ನನ್ನ ಕ್ಷೇತ್ರದ ಕಂದಾಯ ಅಧಿಕಾರಿಗಳಿಂದ ಸಂತ್ರಸ್ತ ಕುಟುಂಬಗಳನ್ನು ಗುರುತಿಸಿ ಅವರಿಗೆ ಪರಿಹಾರ ದೊರಕಿಸುವ ಕಾರ್ಯಕ್ರಮ ನಡೆಯುತ್ತಿದೆ. ಬಿಪಿಎಲ್ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 50 ಸಾವಿರ ಹಾಗೂ ರಾಜ್ಯ ಸರಕಾರ ಒಂದು ಲಕ್ಷ ರೂಪಾಯಿಯನ್ನು ನೀಡುತ್ತಿದೆ. ಎಪಿಎಲ್ ಸಂತ್ರಸ್ತ ಕುಟುಂಬದ ಸದಸ್ಯರಿಗೆ ರಾಜ್ಯ ಸರಕಾರ ತಲಾ ಐವತ್ತು ಸಾವಿರ ರೂಪಾಯಿ ನೀಡುತ್ತಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು

ಇದೇ ಸಂದರ್ಭದಲ್ಲಿ 11 ಫಲಾನುಭವಿಗಳಿಗೆ ಕೇಂದ್ರ ಸರಕಾರದ ಉಜಾಲ ಯೋಜನೆಯಲ್ಲಿ ಗ್ಯಾಸ್ ಸೌಲಭ್ಯಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಂದಾವರ ಪಂಚಾಯತ್ ಅಧ್ಯಕ್ಷರಾದ ಉಮೇಶ್ ಮೂಲ್ಯ, ಉಪತಹಶೀಲ್ದಾರ್ ಶಿವಪ್ರಸಾದ್, ಕಂದಾಯ ಅಧಿಕಾರಿಗಳು, ಪಂಚಾಯತ್ ಸದಸ್ಯರುಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.