Saturday, September 21, 2024
ಮೂಡಬಿದಿರೆಸುದ್ದಿ

ರಸ್ತೆ ಪಕ್ಕದಲ್ಲಿ ತುಂಡರಿಸಿದ ರೀತಿಯಲ್ಲಿ ದನದ ತಲೆ ಪತ್ತೆ- ಕಹಳೆ ನ್ಯೂಸ್

ಮೂಡುಬಿದಿರೆ: ತುಂಡರಿಸಿದ ರೀತಿಯಲ್ಲಿ ದನದ ತಲೆ ಪತ್ತೆಯಾದ ಘಟನೆ ಮಹಾವೀರ ಕಾಲೇಜು ಸಮೀಪದ ಕೊಡಂಗಲ್ಲು ಕೀರ್ತಿನಗರ ಕ್ರಾಸ್ ಬಳಿ ನಡೆದಿದೆ.

ಮುಂಡದಿಂದ ಬೇರ್ಪಟ್ಟಿದ್ದ ಹಸುವಿನ ತಲೆಬುರುಡೆಯನ್ನು ಗೋಣಿ ಚೀಲದಲ್ಲಿ ಸುತ್ತಿ ರಸ್ತೆಯ ಪಕ್ಕದಲ್ಲಿ ಬಿಟ್ಟು ಹೋಗಿದ್ದು, ಘಟನೆ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸ್ಥಳೀಯ ಪೆÇಲೀಸರು ತಲೆಬುರುಡೆಯನ್ನು ಹೊರತೆಗೆಯುವ ವ್ಯವಸ್ಥೆ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಘಟನೆಗೆ ಪ್ರತಿಕ್ರಿಯಿಸಿದ ಮೂಡುಬಿದಿರೆಯ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು, “ಕಿಡಿಗೇಡಿಗಳು ಹಿಂದೂಗಳ ಭಾವನೆಗಳೊಂದಿಗೆ ಆಟವಾಡುವ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ. ಅಪರಾಧಿಗಳನ್ನು ಬಂಧಿಸಲು ಪೆÇಲೀಸರಿಗೆ 48 ಗಂಟೆಗಳ ಸಮಯವನ್ನು ನೀಡಲಾಗಿದ್ದು, ಅದು ವಿಫಲವಾದರೆ ಇಲ್ಲಿನ ಪೆÇಲೀಸ್ ಠಾಣೆಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದಾರೆ.

ಜಾಹೀರಾತು