Saturday, September 21, 2024
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ: ಟಿಪ್ಪರ್ ಲಾರಿ – ಬೈಕ್ ನಡುವೆ ಬೀಕರ ರಸ್ತೆ ಅಪಘಾತ: ಇಬ್ಬರು ಯುವಕರು ದಾರುಣ ಸಾವು- ಕಹಳೆ ನ್ಯೂಸ್

ಬೆಳ್ತಂಗಡಿ: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದಲ್ಲಿ ನಡೆದಿದೆ.

ಮೃತ ಯುವಕರನ್ನು ನಾವೂರು ನಿವಾಸಿಗಳಾದ ಮಿಸ್ಪಾಯಿಲ್ (20) ಹಾಗೂ ಆಸ್ಪಾನ್ (19) ಎಂದು ಗುರುತಿಸಲಾಗಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಹಾಗೂ ಸಹಸವಾರ ಸ್ಥಳದಲ್ಲಿಯೇ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು