Friday, September 20, 2024
ದಕ್ಷಿಣ ಕನ್ನಡಸುದ್ದಿ

ಅಜೆಕಾರು : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಬಾದಾಮಿ ಮೂಲದ ಯುವಕ- ಕಹಳೆ ನ್ಯೂಸ್

ಕಾರ್ಕಳ : ಯುವಕನೊಬ್ಬ ನೇಣಿಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ಜ್ಯೋತಿ ಹೈಸ್ಕೂಲ್ ಸಮೀಪದ ದೊಡ್ಡಪಲ್ಕೆ ಕ್ರಾಸ್ ಎಂಬಲ್ಲಿ ನಡೆದಿದೆ.

ಯುವಕನನ್ನು ಮೃತ್ಯುಂಜಯ (28)ಎಂದು ಗುರುತಿಸಲಾಗಿದ್ದು, ಆತನ ತಂದೆ ತಾಯಿ ಬಾದಾಮಿಯಲ್ಲಿ ನೆಲೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತ್ಯುಂಜಯ ಅಜೆಕಾರಿನಲ್ಲಿ ವಾಹನ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಕೆಲವು ದಿನಗಳ ಹಿಂದೆ ಕೆಲಸವನ್ನು ಬಿಟ್ಟು ಏಕಾಂಗಿಯಾಗಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಇಂದು ಆತ್ಮಹತ್ಯೆ ಗೆ ಶರಣಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಜಾಹೀರಾತು