Friday, September 20, 2024
ದಕ್ಷಿಣ ಕನ್ನಡಸುದ್ದಿ

ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಬಡ ಕೂಲಿ ಕಾರ್ಮಿಕರಿಗೆ ಉಚಿತ ಊಟ ನೀಡಿದ ದೀಪಕ್ ಸನಿಲ್ ರವರಿಗೆ ಸನ್ಮಾನ – ಕಹಳೆ ನ್ಯೂಸ್

ಮಂಗಳೂರು: ಕುದ್ರೋಳಿ ಯುವಕ ಸಂಘ ಶಿವ ಫ್ರೆಂಡ್ಸ್ ಬರ್ಕೆ ಇವರ ಸಹಭಾಗಿತ್ವದಲ್ಲಿ ಬಿಜೆಪಿ ಕಲೆ ಮತ್ತು ಸಾಂಸ್ಕøತಿಕ ಪ್ರಕೋಷ್ಠ ದ.ಕ.ಜಿಲ್ಲೆ ವತಿಯಿಂದ ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಬಡ ಕೂಲಿ ಕಾರ್ಮಿಕರಿಗೆ ಉಚಿತ ಊಟ ನೀಡಿದ ದೀಪಕ್ ಸನಿಲ್ ರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ಪ್ರಕೋಷ್ಠದ ರಾಜ್ಯ ಸದಸ್ಯರಾದ ಚಂದ್ರಶೇಖರ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಮುಖ್ಯ ಅತಿಥಿಯಾಗಿ ರವೀಂದ್ರ ಸುಧೀರ್ ಭಂಡಾರ್ಕರ್ ಮಂಗಳೂರು ದಕ್ಷಿಣ ಮಂಡಲದ ಪ್ರಧಾನ ಕಾರ್ಯದರ್ಶಿ ರೂಪ .ಡಿ. ಬಂಗೇರ, ಅಧ್ಯಕ್ಷತೆಯನ್ನು ಜಿಲ್ಲಾ ಸಂಚಾಲಕರಾದ ಸರಪಾಡಿ ಅಶೋಕ ಶೆಟ್ಟಿ ವಹಿಸಿದ್ದರು.ಹಾಗೂ ಮಹಾ ನಗರ ಪಾಲಿಕೆ ಸದಸ್ಯರಾದ ಸಂಧ್ಯಾ ಉಪಸ್ಥಿತರಿದ್ದರು .

ಕಾರ್ಯಕ್ರಮದಲ್ಲಿ ಜಿಲ್ಲಾ ಸಹ ಸಂಚಾಲಕರಾದ ಚೇತಕ್ ಪೂಜಾರಿ ಸ್ವಾಗತಿಸಿ, ದಕ್ಷಿಣ ಪ್ರಕೋಷ್ಠದ ಸಂಚಾಲಕರಾದ ಯಾದವ ಕೋಟ್ಯಾನ್ ಧನ್ಯವಾದ ಸಲ್ಲಿಸಿದರು.