Friday, September 20, 2024
ಸುದ್ದಿ

Breaking News : ” ಪೆತ್ತ ಕಂಡ್ಯೆರ್ ಒಲಾಯಿ ಪೋಯೇರ್ ” ಕುಖ್ಯಾತ ದನ ಕಳ್ಳ ಇರ್ಷಾದ್ ಮತ್ತು ರಶೀದ್ ಚಡ್ಡಿಯಲ್ಲಿ ! – ಕಹಳೆ ನ್ಯೂಸ್

ಬಂಟ್ವಾಳ: ರಾಜ್ಯದ ಗಡಿಭಾಗದಿಂದ ಕೇರಳಕ್ಕೆ ಅಕ್ರಮವಾಗಿ ಗೋಸಾಗಾಟ ಮಾಡಲೆತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕೇರಳದ ಎಣ್ಮಕಜೆ ಗ್ರಾಮದ ಬಳಪು ಮನೆ ನಿವಾಸಿ ಇಷಾದ್ (21)ಮತ್ತು ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಮರಕ್ಕಿಣಿ ನಿವಾಸಿ ರಾಶೀದ್ (19) ಬಂಧಿತ ಆರೋಪಿಗಳು.

ಜಾಹೀರಾತು
ಜಾಹೀರಾತು
ಜಾಹೀರಾತು

ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಎಂಬಲ್ಲಿ ಪೆರುವಾಯಿ ಕಡೆಯಿಂದ ಬಾಯಾರು ಕೇರಳದ ಕಡೆಗೆ ಜಾನುವಾರು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ವಿಟ್ಲ ಪೊಲೀಸರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 2  ದನ ಹಾಗೂ ಸಾಗಾಟ‌ ಮಾಡಲು ಉಪಯೊಗಿಸಿದ ಪಿಕಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಜಾಹೀರಾತು