Friday, September 20, 2024
ಸುದ್ದಿ

ಫೇಸ್‌ಬುಕ್‌ ಪೇಜ್ ನಲ್ಲಿ ನಿಂದನಾತ್ಮಕ ಸಂದೇಶ ಪೋಸ್ಟ್ ಮಾಡಿದ ಪುಂಡ ಬಶೀರ್ ಅಡ್ಯಾರ್‌ ವಿರುದ್ಧ ದೂರು ದಾಖಲು – ಕಹಳೆ ನ್ಯೂಸ್

ಮಂಗಳೂರು, ಜೂ 18 : ಹಿಂದೂ ದೇವರ ಬಗ್ಗೆ ಬಶೀರ್ ಅಡ್ಯಾರ್‌ ಎಂಬ ಹೆಸರಿನ ಫೇಸ್‌ಬುಕ್‌ ಪೇಜ್ ನಲ್ಲಿ ಅವಹೇಳನಕಾರಿ ಚಿತ್ರದ ಜತೆಗೆ ನಿಂದನಾತ್ಮಕ ಸಂದೇಶ ಪ್ರಕಟಿಸಿದ ಸಂಬಂಧಿಸಿ ಬರ್ಕೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಡಿಸಿಪಿ ಹನುಮಂತರಾಯಪ್ಪ ತಿಳಿಸಿದ್ದಾರೆ. ಅಲ್ಲದೆ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್‌ ಅಥವಾ ವಾಟ್ಸ್‌ಆಪ್‌ ಮೂಲಕ ಈ ರೀತಿಯ ಸಮಾಜದ ಶಾಂತಿಗೆ ಭಂಗ ತರುವ ಆಕ್ಷೇಪಾರ್ಹ ವಿಚಾರವನ್ನು ಸ್ನೇಹಿತರೊಂದಿಗೆ ಹಂಚಿಕೊಳ್ಳುವುದು ಅಪರಾಧ ಎಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಜನರು ಎಚ್ಚರಿಕೆ ವಹಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

ಫೇಸ್‌ಬುಕ್‌ ಪೇಜ್ನಲ್ಲಿ ಏನಿದೆ ?

ಜಾಹೀರಾತು
ಜಾಹೀರಾತು
ಜಾಹೀರಾತು

ಬಶೀರ್ ಅಡ್ಯಾರ್‌ ಫೇಸ್‌ಬುಕ್‌ ಖಾತೆಯಲ್ಲಿ ಲಕ್ಷ್ಮೀದೇವಿ ಮತ್ತು ಶಿವಾಜಿ, ಪ್ರಧಾನಿ ನರೇಂದ್ರ ಮೋದಿ ಚಿತ್ರವನ್ನು ಎಡಿಟ್‌ ಮಾಡಿ ಅಪ್‌ಲೋಡ್‌ ಮಾಡಿ ಅಶ್ಲೀಲವಾದ ಹಾಡನ್ನು ಬಳಸಲಾಗಿತ್ತು. ಅಲ್ಲದೆ ಅಮರ್ ಅಕ್ಬರ್ ಅಂಥೋನಿ ಮತ್ತು ಇತರ 12 ಖಾತೆಗಳನ್ನು ಸಂದೇಶಕ್ಕೆ ಟ್ಯಾಗ್ ಮಾಡಲಾಗಿದೆ.

ಜಾಹೀರಾತು

’ಸಾಮಾಜಿಕ ನೆಮ್ಮದಿಗೆ ಭಂಗ ತರುವ ಈ ಪ್ರಕರಣದ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ವಿಶ್ವ ಹಿಂದು ಪರಿಷತ್‌ ಮುಖಂಡ ಜಗದೀಶ್‌ ಶೇಣವ ಮತ್ತು ಶರಣ್‌ಪಂಪ್‌ವೆಲ್‌ ಪೊಲೀಸ್‌ ಆಯುಕ್ತರನ್ನು ಭೇಟಿಯಾಗಿ ಮನವಿ ಮಾಡಿದ್ದರು.