Friday, September 20, 2024
ಸುದ್ದಿ

ಮಂಗಳೂರು : ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರಿಗೆ ನಡೆದ ಯೋಗ ತರಬೇತಿ ಶಿಬಿರ – ಕಹಳೆ ನ್ಯೂಸ್

ಮಂಗಳೂರು : “ಅಂತರಾಷ್ಟ್ರೀಯ ಯೋಗ ದಿನಾಚರಣೆ ಜೂನ್ 21” ಇದರ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರಿಗೆ ಪೂರ್ವಭಾವಿ ಯೋಗ ತರಬೇತಿ ಶಿಬಿರ ಜೂನ್ 19ರಂದು ಸರ್ಕಾರಿ ಕಾಲೇಜು ಹಂಪನಕಟ್ಟೆ ಮಂಗಳೂರಿನಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಖ್ಯಾತ ಯೋಗ ಗುರು ಗೋಪಾಲಕೃಷ್ಣ ದೇಲಂಪಾಡಿ ಮತ್ತು ಯೋಗ ಶಿಕ್ಷಕಿ ಸುಮಾ ಇವರ ಮಾರ್ಗದರ್ಶನದಲ್ಲಿ ಈ ತರಬೇತಿ ಶಿಬಿರ ನಡೆಯಿತು.

ಜಾಹೀರಾತು

ಯೋಗ ಮನುಷ್ಯನ ಆರೋಗ್ಯಕ್ಕೆ ಅತೀ ಅವಶ್ಯಕ. ದೈಹಿಕ ಅರೋಗ್ಯ ಮತ್ತು ಮಾನಸಿಕ ನೆಮ್ಮದಿಗೆ ಯೋಗವನ್ನು ಪ್ರತಿಯೊಬ್ಬರು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಗೋಪಾಲಕೃಷ್ಣ ದೇಲಂಪಾಡಿ ಅವರು ಕರೆ ನೀಡಿದರು.

ದಿನದ 8 ಗಂಟೆಗಳ ಕಾಲ ನಿಂತುಕೊAಡು ಒತ್ತಡದ ಕೆಲಸ ಮಾಡುವ ಗೃಹರಕ್ಷಕರಿಗೆ ಯೋಗ ಅತ್ಯಂತ ಅನಿವಾರ್ಯ ಎಂದು ಅವರು ನುಡಿದರು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ನೇತೃತ್ವದಲ್ಲಿ ಈ ಶಿಬಿರ ನಡೆಯಿತು. ಸುಮಾರು 25 ಮಂದಿ ಗೃಹರಕ್ಷಕರು ಈ ಶಿಬಿರದಲ್ಲಿ ಭಾಗವಹಿಸಿದರು.