Friday, September 20, 2024
ಬೆಂಗಳೂರುಸಿನಿಮಾಸುದ್ದಿ

ದಿಯಾ ಖ್ಯಾತಿಯ ಪೃಥ್ವಿ ಅಂಬರ್ ಮತ್ತು ಪ್ರಮೋದ್ ಕಾಂಬಿನೇಷನ್ ಚಿತ್ರಕ್ಕೆ ಚಾಲನೆ – ಕಹಳೆ ನ್ಯೂಸ್

ನ್ನಡದ ಪ್ರತಿಭಾವಂತ ಯುವ ನಟರಾದ ದಿಯಾ ಖ್ಯಾತಿಯ ಪೃಥ್ವಿ ಅಂಬರ್ ಮತ್ತು ಪ್ರೀಮಿಯರ್ ಪದ್ಮಿನಿ ಖ್ಯಾತಿಯ ಪ್ರಮೋದ್ ಕಾಂಬಿನೇಷನ್ ಹೊಸ ಚಿತ್ರಕ್ಕೆ  ಚಾಲನೆ ಸಿಕ್ಕಿದೆ. ಕನ್ನಡ ಚಿತ್ರರಂಗದ ಇಬ್ಬರು ಪ್ರತಿಭಾನ್ವಿತ ನಾಯಕರಿಗೆ ನಿರ್ಮಾಣ ಮಾಡುವ ಕೆಲಸಕ್ಕೆ ಎಂ ಮುನೇಗೌಡ ಮುಂದಾಗಿದ್ದಾರೆ. ಇವತ್ತು ಎಸ್ ವಿಸಿ ಫಿಲ್ಮಂಸ್ ಪ್ರೊಡಕ್ಷನ್ ನ ಮೊದಲ ಚಿತ್ರದ ಮುಹೂರ್ತ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ದಿಯಾ ಖ್ಯಾತಿಯ ಪೃಥ್ವಿ ಅಂಬಾರ್ ಹಾಗೂ ರತ್ನನ್ ಪ್ರಪಂಚ ಖ್ಯಾತಿಯ ಪ್ರಮೋದ್ ನಾಯಕರಾಗಿ ನಟಿಸ್ತಿರುವ ಸಿನಿಮಾಗೆ ಭುವನಂ ಗಗನಂ ಎಂಬ ಟೈಟಲ್ ಇಡಲಾಗಿದ್ದು,  ಈ ಹಿಂದೆ ರಾಜರು ಎಂಬ ಚಿತ್ರ ಮಾಡಿದ್ದ ಗಿರೀಶ್ ಮೂಲಿಮನಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ ನಟ ಪ್ರಮೋದ್, ಕ್ಲಾಸ್ ಲವ್ ಸ್ಟೋರಿ ಸಿನಿಮಾ ಹುಡುಕುತ್ತಿದ್ದೇ. ಈ ಕಥೆ ಕೇಳಿ ಏನೋ ಇಷ್ಟ ಆಗಿದೆ. ನಾನು ಈ ಸಿನಿಮಾದಲ್ಲಿ ಬೇರೆ ರೀತಿ ಕಾಣಿಸ್ತೇನೆ. ಇಡೀ ಸಿನಿಮಾ ನನಗೆ ಬೇರೆ ಮಜಲು ಕ್ರಿಯೇಟ್ ಮಾಡುತ್ತದೆ ಅನ್ನೋ ನಂಬಿಕೆ ಈ ಚಿತ್ರ ಒಪ್ಪಿಕೊಂಡಿದ್ದೇನೆ. ಈ ಅವಕಾಶ ಕೊಟ್ಟ ಎಲ್ಲರಿಗೂ ಧನ್ಯವಾದ. ಒಳ್ಳೆ ಸಿನಿಮಾವಾಗುತ್ತದೆ. ಎಲ್ಲರೂ ಸೇರಿ ಕೆಲಸ ಮಾಡೋಣಾ ಎಂದರು. ಪೃಥ್ವಿ ಅಂಬಾರ್, ಯಾವುದೇ ಸಿನಿಮಾವಾಗಲಿ ಫ್ಯಾಷನೇಟೇಡ್ ನಿರ್ಮಾಪಕರು, ನಿರ್ದೇಶಕರು ಬೇಕು. ಈ ಸಿನಿಮಾದಲ್ಲಿ ಎರಡು ಇದೆ. ನಿರ್ದೇಶಕರ ಜೊತೆ ಈ ಹಿಂದೆ ಕೆಲಸ ಮಾಡಿದ್ದೇನೆ. ನನಗೆ ಟೈಟಲ್ ಬಹಳ ಇಷ್ಟವಾಯ್ತು. ನನ ಹೆಸ್ರು ಅರ್ಥ ಕೂಡ ಭುವನಂ ಗಗನಂ. ಕಥೆ ಕೇಳಿದಾಗ ನನಗೆ ಬಹಳ ಕನೆಕ್ಟ್ ಆಗಿತ್ತು. ಪ್ರಮೋದ್ ಅದ್ಭುತ ಕಲಾವಿದ. ಇಡೀ ತಂಡದ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ಖುಷಿ ಎಂದು ಅಭಿಪ್ರಾಯ ಹಂಚಿಕೊಂಡರು.

ಜಾಹೀರಾತು

ನಿರ್ದೇಶಕ ಗಿರೀಶ್ ಮೂಲಿಮನಿ, ಈ ಹಿಂದೆ ರಾಜರು ಎಂಬ ಸಿನಿಮಾ ಮಾಡಿದ್ದೇನೆ. ಇದು ನನ್ನ ಎರಡನೇ ಸಿನಿಮಾ. ಎಸ್ ವಿಸಿ ಬ್ಯಾನರ್ ಅಂದ್ರೆ ಅದು ಡ್ರೀಮ್. ಸಿನಿಮಾ ಮಾಡೋದು ಅವರ ಕನಸು. ಎಸ್ ವಿಸಿ ಬ್ಯಾನರ್ ನಡಿ ನನಗೆ ಮೊದಲ ಸಿನಿಮಾ ಮಾಡಲು ಅವಕಾಶ ಸಿಕ್ಕಿರೋದು ಖುಷಿ. ನನ್ನ ಹೊಸ ಜರ್ನಿ ಸಕ್ಸಸ್ ಆಗುತ್ತೇ, ಫೀಲ್ ಗುಡ್ ಮೂವೀ ಮಾಡುತ್ತೇವೆ ಎಂಬ ನಂಬಿಕೆ ಇದೆ ಎಂದರು. ಎಂ ಮುನೇಗೌಡ, ಇದು ನನ್ನ ಮೊದಲ ಸಿನಿಮಾ. ನಿರ್ದೇಶಕರು  ಹೇಳಿದ ಕಥೆ ವಿಭಿನ್ನ ಅನಿಸಿತು. ಒಳ್ಳೆ ಕಲಾವಿದರ ದಂಡೇ ಇದೆ. ಪ್ರತಿಯೊಬ್ಬರು ಸಿನಿಮಾಗೆ ಬೆಂಬಲ ನೀಡಿ ಎಂದರು.

ಭುವನಂ ಗಗನಂ ಸಿನಿಮಾ ಲವ್, ರೋಮ್ಯಾನ್ಸ್, ಫ್ಯಾಮಿಲಿ ಎಮೋಷನ್ ಕಥಾಹಂದರ ಸಿನಿಮಾವಾಗಿದ್ದು, ನಗರ, ಹಳ್ಳಿ ಎರಡು ಬ್ಯಾಕ್ ಡ್ರಾಪ್ ನಲ್ಲಿ ನಡೆಯುವ ಕಥೆಯಾಗಿದ್ದು, ಪ್ರಮೋದ್ ಗೆ ಜೋಡಿಯಾಗಿ ಲವ್ ಮಾಕ್ಟೇಲ್ ಖ್ಯಾತಿಯ ರೆಚೆಲ್ ಡೇವಿಡ್, ಪೃಥ್ವಿಗೆ ಜೋಡಿಯಾಗಿ ವಾಮನ ಸಿನಿಮಾದ ನಾಯಕಿ ರಚನಾ ರೈ ನಟಿಸ್ತಿದ್ದಾರೆ. ಬರುವ ಜುಲೈ 1ರಿಂದ ಸಿನಿಮಾದ ಶೂಟಿಂಗ್ ಶುರುವಾಗ್ತಿದ್ದು, ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸುಜಯ್ ಕುಮಾರ್ ಬಾವಿಕಟ್ಟಿ ಕ್ಯಾಮೆರಾ ಕೈಚಳಕ, ಗುಮ್ಮಿನೇನಿ ವಿಜಯ್ ಮ್ಯೂಸಿಕ್ ಕಿಕ್, ಸುನೀಲ್ ಕಶ್ಯಪ್ ಸಂಕಲನ ಸಿನಿಮಾಕ್ಕಿದೆ.