Friday, September 20, 2024
ಸುದ್ದಿ

ಉಚಿತ ಬಸ್‌ಗಾಗಿ ಪ್ರತಿಭಟನೆ ನಡೆಸುತ್ತಿದ್ದ ತುಮಕೂರಿನ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ – ಕಹಳೆ ನ್ಯೂಸ್

ತುಮಕೂರು: ಉಚಿತ ಬಸ್‌ ಪಾಸ್‌ಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಟಿ ಚಾರ್ಜ್‌ ಮಾಡಿದ್ದಾರೆ.

ನಗರದ ಶಿವಕುಮಾರ ಸ್ವಾಮೀಜಿ ಸರ್ಕಲ್‌ನಲ್ಲಿ ರಸ್ತೆ ತಡೆ ನಡೆಸಲು ಮುಂದಾದ ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಈ ವೇಳೆ ರಸ್ತೆಯಲ್ಲಿ ಬಿದ್ದ ವಿದ್ಯಾರ್ಥಿನಿಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಿಪಿಐ ಚಂದ್ರಶೇಖರ್ ವಿದ್ಯಾರ್ಥಿಗಳ ಮೇಲೆ ಮುಗಿಬಿದ್ದು ಲಾಠಿ ಚಾರ್ಜ್‌ ಮಾಡಿದ್ದಾರೆ.

ತಣ್ಣಗಿದ್ದ ಎಸ್‌ಎಸ್‌ ಸರ್ಕಲ್‌ ಕೆಲಹೊತ್ತಿನಲ್ಲೇ ರಣಾಂಗಣವಾಗಿ ಬದಲಾಯಿತು.