Friday, September 20, 2024
ಸುದ್ದಿ

ವಿದ್ಯಾಭಾರತಿ ಕ್ರೀಡಾಕೂಟದಲ್ಲಿ ತೆಂಕಿಲ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿನಿ ಡಿಂಪಲ್ ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು: ವಿದ್ಯಾಭಾರತಿ ಕರ್ನಾಟಕ, ಹಾಗೂ ಬಾಲ ಭಾರತಿ ವಿದ್ಯಾಲಯ, ಬಳ್ಳಾರಿ ಇವರ ಜಂಟಿ ಆಶ್ರಯದಲ್ಲಿ ಬಾಲ ಭಾರತಿ ವಿದ್ಯಾಲಯ, ಬಳ್ಳಾರಿ ಕ್ರೀಡಾಂಗಣದಲ್ಲಿ ಅ.13, 14ರಂದು ಕರ್ನಾಟಕ ಆಂಧ್ರ ಪ್ರದೇಶ್ ತೆಲಂಗಣ ರಾಜ್ಯ ವನ್ನು ಒಳಗೊಂಡ ಕ್ಷೇತ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿನಿ ಡಿಂಪಲ್ ಶೆಟ್ಟಿ(ಮೆರ್ಲ ನಿವಾಸಿ ಉದಯ ಶೆಟ್ಟಿ ಮತ್ತು ಸುನೀತಾ ಶೆಟ್ಟಿ ದಂಪತಿ ಪುತ್ರಿ) – 100 ಮೀಟರ್ -ದ್ವಿತೀಯ, 4*100 ಮೀಟರ್ ರಿಲೇ –ಪ್ರಥಮ ಸ್ಥಾನ ಪಡೆದುಕೊಂಡಿದ್ದು, ನವೆಂಬರ್ 19ರಿಂದ 23ರವರೆಗೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾಳೆ ಎಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು